Mon. Jan 12th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

ದಾವಣಗೆರೆ: ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯನ ನಿಗೂಢ ಸಾವಿಗೆ ಈ ಒಂದು ವಿಷಯವೇ ಕಾರಣವಾಯ್ತಾ- ಅಳಿಯನ ಆತ್ಮಹತ್ಯೆ ಬಗ್ಗೆ ಬಿ.ಸಿ. ಪಾಟೀಲ್‌ ಹೇಳಿದ್ದಾದ್ರೂ ಏನು?

ದಾವಣಗೆರೆ (ಜು.09): ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಮಗಳ ಗಂಡ ಪ್ರತಾಪ್ ಕುಮಾರ್ ನಿಗೂಢವಾಗಿ ಸಾವನ್ನಪ್ಪಿದ್ದು, ಕಾರಿನಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಯಾವಾಗಲೂ ಲವಲವಿಕೆಯಿಂದ ಮಾವನ ರಾಜಕೀಯ ವ್ಯವಹಾರ ನೋಡಿಕೊಳ್ಳುತ್ತಿದ್ದವ ಹೀಗೆ ಸಾವನ್ನಪ್ಪಿರುವುದು ಬಿ.ಸಿ. ಪಾಟೀಲ್ ಕುಟುಂಬಕ್ಕೆ ಆಘಾತ ತಂದಿದೆ. ಇದೊಂದು ಆತ್ಮಹತ್ಯೆ ಪ್ರಕರಣ ಎನ್ನಲಾಗಿದ್ದು‌, ಮೃತ ಪ್ರತಾಪ ಕುಮಾರ್ ಸಹೋದರ ಪ್ರಭುದೇವ ಅವರು ಈ ಪ್ರಕರಣ ಸಂಬಂಧ ದಾವಣಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಇದೊಂದು ಅಸಹಜ ಸಾವು ಎಂದು ದಾವಣಗೆರೆ ಜಿಲ್ಲೆ ಹೊನ್ನಾಳಿ ಠಾಣೆಗೆ ಪ್ರಭುದೇವ ಅವರು ದೂರು ಸಲ್ಲಿಸಿದ್ದಾರೆ.

ಮದುವೆ ಆಗಿ 16 ವರ್ಷವಾಗಿತ್ತು, ಮಕ್ಕಳಾಗಿರಲಿಲ್ಲ ಎಂದು ಪ್ರತಾಪ್ ತೀವ್ರ ಬೇಸರದಲ್ಲಿದ್ದ. ಮಂಕಾಗಿ ತೀವ್ರ ಖಿನ್ನತೆಗೆ ಒಳಗಾಗಿದ್ದ ಎಂದು ಮೃತ ಪ್ರತಾಪ ಕುಮಾರ್ ಸಹೋದರ ಪ್ರಭುದೇವ ಅವರು ದೂರು ದಾಖಲಿಸಿದ್ದಾರೆ.

ಮಕ್ಕಳಾಗಲಿಲ್ಲ ಎಂದು ಪ್ರತಾಪ್ ಕುಮಾರ್ ಸಾವಿಗೆ ಶರಣಾದ್ರಾ?:
ಮೊದಲ ಪುತ್ರಿಯ ಅಳಿಯ ಪ್ರತಾಪ್ ಕುಮಾರ್ ಬಿ.ಸಿ.ಪಾಟೀಲ್ ಎಲ್ಲಾ ವ್ಯವಹಾರ ನೋಡಿಕೊಂಡು , ಮಾವನ ಜೊತೆಯೇ ಸದಾ ಇರುತ್ತಿದ್ದರಂತೆ. ನಿನ್ನೆ ಬೆಳಗ್ಗೆ ಊರಿಗೆ ಹೋಗಿ ಬರ್ತೀನಿ ಅಂತಾ ಹೇಳಿ ಹಿರೇಕೆರೂರಿನಿಂದ ತೆರಳಿದ್ದರು. ಆದ್ರೆ ದಾರಿ ಮಧ್ಯವೇ ಅವರು ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ. 2008ರಲ್ಲಿ ವಿವಾಹವಾಗಿದ್ದ ಪ್ರತಾಪ್‌ ದಂಪತಿಗಳಿಗೆ ಇನ್ನೂ ಮಕ್ಕಳಾಗಿರಲಿಲ್ಲ ಎಂಬ ಕೊರಗಿತ್ತು. ಕುಡಿತದ ಚಟವೂ ಇದ್ದು ಫ್ಯಾಟಿ ಲಿವರ್ ಆಗಿತ್ತು ಎನ್ನಲಾಗಿದೆ. ಬೆಂಗಳೂರಿನ ಪುನರ್ವಸತಿ ಕೇಂದ್ರದಲ್ಲಿ 2 ತಿಂಗಳು ಚಿಕಿತ್ಸೆ ಕೊಡಿಸಿದ್ದು, ಎಲ್ಲಾ ಸರಿ ಹೋಗಿತ್ತು ಎನ್ನುವಷ್ಟರಲ್ಲಿ ಮತ್ತೆ ಕುಡಿತದ ಅ‍ಭ್ಯಾಸ ಶುರು ಮಾಡಿದ್ದರು. ಇದರಿಂದ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *