Wed. Apr 9th, 2025

ಉಪ್ಪಿನಂಗಡಿ :(ಜು.18) ಐರಾವತ ಬಸ್ ಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿಯ ಹಳೆಗೇಟು ಬಳಿ ಇಂದು ನಡೆದಿದೆ.

ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಲಾಗಿದ್ದು, ಈ ವೇಳೆ ರಸ್ತೆಯ ಗುಂಡಿಯಲ್ಲಿದ್ದ ನೀರು ನೆರವಿಗೆ ಬಂದಿದೆ.

ಇದನ್ನೂ ಓದಿ:https://uplustv.com/2024/07/18/udupi-dead-body-of-a-young-man-found-near-railway-tracks-suspect-suicide/

ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಂಜಿನ್ ಬಳಿ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದಾನೆ.

ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಜನರು ರಸ್ತೆಯಲ್ಲಿದ್ದ ಕೆಸರು, ಮಣ್ಣು, ನೀರನ್ನು ಬಸ್ಸಿಗೆ ಎರಚಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *