ಶಿಶಿಲ:(ಜು.19) ಇತಿಹಾಸ ಪ್ರಸಿದ್ಧ ಮತ್ಸ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ



ಸಮೀಪ ಹರಿಯುತ್ತಿರುವ ಕಪಿಲ ನದಿಯು ಉಕ್ಕಿ ಹರಿಯುತ್ತಿದ್ದು,

ನದಿಯ ನೀರು ದೇವಸ್ಥಾನದ ಅಂಗಳಕ್ಕೆ ನುಗ್ಗಿದೆ.

ಪ್ರವಾಹದ ಜೊತೆ ದೊಡ್ಡ, ದೊಡ್ಡ ಗಾತ್ರದ ಮರಗಳು ಬರುತ್ತಿದ್ದು,

ಶಿಶಿಲದ ಕಿಂಡಿ ಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿದೆ.

ಇದರಿಂದಾಗಿ ನೀರು ಸರಾಗವಾಗಿ ಹರಿಯಲು ಅಡ್ಡಿಯಾಗಿ, ನೀರು ಏರುತ್ತಿದೆ.

ನೀರು ಏರುತ್ತಿರುವುದರಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ..
