Sat. Apr 19th, 2025

Ramanagara: ರಾಮನಗರದಲ್ಲಿ ಶಿಕ್ಷಕರ ಅಮಾನುಷ ಕೃತ್ಯ- ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು

ರಾಮನಗರ:(ಜು.27) ಶಿಕ್ಷಕರೆ ವಿದ್ಯಾರ್ಥಿನಿಯರ ಜಡೆ ಕತ್ತರಿಸಿದ ಘಟನೆ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.

8 ನೇ ತರಗತಿಯ ಮೂವರು ವಿದ್ಯಾರ್ಥಿನಿಯರು ಶಾಲೆಗೆ ಬರುವಾಗ ಎರಡು ಜಡೆ ಹಾಕಿಲ್ಲ ಎಂದು ಅಲ್ಲಿನ ಶಿಕ್ಷಕರು ಕೂದಲಿಗೆ ಕತ್ತರಿಯನ್ನು ಹಾಕಿದ್ದಾರೆ.

ಶಾಲೆಯ ದೈಹಿಕ ಶಿಕ್ಷಕ ಶಿವಕುಮಾರ್, ಸಹಶಿಕ್ಷಕಿ ಪವಿತ್ರ ಅಮಾನುಷ ಕೃತ್ಯವೆಸಗಿದ್ದಾರೆ. ಶಿಕ್ಷಕರ ಕೃತ್ಯಕ್ಕೆ ವಿದ್ಯಾರ್ಥಿಯರ ಪೋಷಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಅಕ್ಕೂರು ಠಾಣೆಯ ಪೋಲಿಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: https://uplustv.com/2024/07/27/bengaluru-ನಾಯಿ-ಮಾಂಸ-ಮಾರಾಟ-ಆರೋಪ-

Leave a Reply

Your email address will not be published. Required fields are marked *