Mon. Feb 17th, 2025

Belthangadi : ಬೈಕ್- ಬೊಲೆರೋ ನಡುವೆ ಅಪಘಾತ -ಬಾಲಕಿ ಮೃತ್ಯು

ಬೆಳ್ತಂಗಡಿ:(ಜು.28) ಮುಂಡಾಜೆ ಸೀಟು ಬಳಿ ಬೈಕ್ ಗೆ ಬೊಲೆರೋ ಡಿಕ್ಕಿಹೊಡೆದು ಸಂಭವಿಸಿದ ಅಪಘಾತದಲ್ಲಿ ನಾಲ್ಕನೇ ತರಗತಿ ಬಾಲಕಿ ಮೇಲೆ ಬೊಲೆರೋ ಹರಿದು ಮೃತಪಟ್ಟ ಘಟನೆ ಶನಿವಾರ ಸಂಜೆ ಸಂಭವಿಸಿದೆ.

ಮುಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಮಗು ಅನರ್ಘ್ಯ ಉಜಿರೆಯಿಂದ ಮನೆಗೆ ಹೊರಟಿದ್ದರು. ಮಾರ್ಗ ಮಧ್ಯ ಬೊಲೆರೋ ಹಿಂದಿನಿಂದ ಢಿಕ್ಕಿ ಹೊಡೆದಿದೆ ಬಳಿಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಿತ್ತು.

ಅನರ್ಘ್ಯ (9) ಗಂಭೀರ ಗಾಯಗೊಂಡಿದ್ದಳು, ತಂದೆಗೆ ಗಾಯವಾಗಿದೆ. ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಬಾಲಕಿ ಜೀವನ್ಮರಣ ಸ್ಥಿತಿಯಲ್ಲಿದ್ದು, ಬಳಿಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಅನರ್ಘ್ಯ ಉಜಿರೆ ಎಸ್‌ಡಿಎಂ ಶಾಲೆಯ 4 ನೇ ತರಗತಿ ವಿದ್ಯಾರ್ಥಿನಿ.

ಅಪಘಾತವಾದ ಬಳಿಕ ತಪ್ಪಿಸಿಕೊಂಡಿದ್ದ, ಬೊಲೆರೋ ವಾಹನವನ್ನು ಸಾರ್ವಜನಿಕರ ಸಹಕಾರದಿಂದ ಪತ್ತೆಹಚ್ಚಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ; https://uplustv.com/2024/07/28/qatar-ನಮ್ಮ-ಕುಂದಾಪ್ರ-ಕನ್ನಡ-ಬಳಗ-ಗಲ್ಫ್-ಇದರ-ನೂತನ-ಅಧ್ಯಕ್ಷರಾಗಿ-ಕತಾರ್

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು