Tue. Jan 13th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

Wayanad Landslide: ನಿಮ್ಮೊಂದಿಗೆ ನಾವಿದ್ದೇವೆ- ಕೇರಳಕ್ಕೆ ಭರವಸೆ ನೀಡಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು(ಜು.31): ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ ಉಂಟಾಗಿ , ಹಲವರು ಮೃತಪಟ್ಟಿದ್ದಾರೆ, ಅನೇಕ ಮಂದಿ ನಾಪತ್ತೆಯಾಗಿದ್ದಾರೆ. ಈಗಾಗಲೇ ಎನ್​ಡಿಆರ್​ಎಫ್​, ಸ್ಥಳೀಯ ಪೊಲೀಸರು ಮತ್ತು ಸೈನ್ಯದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಇದನ್ನೂ ಓದಿ: 🛑ಸುಳ್ಯ: ಕೆ ಎಸ್‌ ಆರ್‌ ಟಿ ಸಿ ಬಸ್‌ ನಲ್ಲಿ ಕಾಣಿಸಿಕೊಂಡ ಬೆಂಕಿ – ಅಪಾಯದಿಂದ ಪಾರು

ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರಿ​​ಗೆ ಕರೆ ಮಾಡಿ, ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, “ರಕ್ಷಣಾ ಕಾರ್ಯಾಚರಣೆಯಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಕೈಜೋಡಿಸಲಿದೆ. ರಕ್ಷಣಾ ತಂಡ, ಅಗತ್ಯ ಸಾಮಗ್ರಿ ಕಳುಹಿಸಲಾಗುತ್ತಿದೆ” ಎಂದು ದೂರವಾಣಿ ಕರೆ ಮಾಡಿ ಹೇಳಿದ್ದಾರೆ.

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಹಾಗೆಯೇ ಗಡಿಜಿಲ್ಲೆ ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್​ ಮಾಡಿದ್ದಾರೆ.

ಐಎಎಸ್​ ಅಧಿಕಾರಿಗಳ ಮೊಬೈಲ್​ ಸಂಖ್ಯೆ:
ಸಿ.ಜಾಫರ್​-9448355577

ದಿಲೀಶ್​ ಶಶಿ – 9556000514

ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆಗಳು:

08226-223163

08226-223161

08226-223160

ವಾಟ್ಸಪ್​​ ಸಂಖ್ಯೆ:
9740942901

ಈ ಮಾಹಿತಿಯನ್ನು ಹೆಚ್ಚೆಚ್ಚು ಜನರಿಗೆ ತಲುಪಿಸಿ, ಸಂಕಷ್ಟದಲ್ಲಿರುವವರಿಗೆ ಸಕಾಲದಲ್ಲಿ ನೆರವು ಸಿಗಲು ಕಾರಣರಾಗಿ ಎಂದು ಜನರಲ್ಲಿ ಸಿಎಂ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *