Sat. Apr 19th, 2025

Bantwala: ಡೆತ್‌ನೋಟ್‌ ಬರೆದಿಟ್ಟು ಯುವಕ ಜೀವಾಂತ್ಯ!!

ಬಂಟ್ವಾಳ:(ಆ.20) ಕೆರೆಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಕೋಕಲ ಎಂಬಲ್ಲಿ ಸಂಭವಿಸಿದೆ. ಕೋಕಲದ ನಿವಾಸಿ ಸಾಯಿ ಶಾಂತಿ ಅವರ ಪುತ್ರ ಸುಮಂತ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಇದನ್ನೂ ಓದಿ: 🛑ಪುತ್ತೂರು: ಅಪ್ರಾಪ್ತ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕನಿಂದ ಇರಿತ

ಮುಂಜಾನೆ 5ಗಂಟೆಯ ಹೊತ್ತಿಗೆ ಎದ್ದು ತೋಟಕ್ಕೆ ತೆರಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆತ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಆತ ಉಜಿರೆಯ ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ. ಕಾಲೇಜಿನಲ್ಲಿ ಎಲ್ಲರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿದ್ದ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *