Sat. Apr 19th, 2025

Dharmasthala: ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ರಾಖಿ ಕಟ್ಟಿದ ನಟಿ ಶೃತಿ!

ಧರ್ಮಸ್ಥಳ:(ಆ.20) ಸ್ಯಾಂಡಲ್‌ವುಡ್ ನಟಿ ಶೃತಿ ಅವರು ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮಂಜುನಾಥನ ದರ್ಶನ ಪಡೆದ ಬಳಿಕ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಗೆ ರಾಖಿ ಕಟ್ಟುವ ಮೂಲಕ ರಕ್ಷಾಬಂಧನ ಆಚರಿಸಿದ್ದಾರೆ.

ಇದನ್ನೂ ಓದಿ: 🛑ಬಂಟ್ವಾಳ: ಡೆತ್‌ನೋಟ್‌ ಬರೆದಿಟ್ಟು ಯುವಕ ಜೀವಾಂತ್ಯ

ನಟಿ ಶೃತಿ ಅವರು ರಕ್ಷಾ ಬಂಧನ ಹಬ್ಬದ ಹಿನ್ನೆಲೆಯಲ್ಲಿ ಪುತ್ರಿ ಗೌರಿ ಜೊತೆಗೆ ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಮಂಜುನಾಥನ ದರ್ಶನ ಪಡೆದುಕೊಂಡು ಅದರ ಜೊತೆಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನೂ ಸಹ ಭೇಟಿಯಾಗಿದ್ದಾರೆ.

ರಕ್ಷಾ ಬಂಧನದ ಹಿನ್ನೆಲೆಯಲ್ಲಿ ನಟಿ ಶೃತಿ ವೀರೇಂದ್ರ ಹೆಗ್ಗಡೆಯವರ ಕೈಗೆ ರಾಖಿ ಕಟ್ಟಿ ಆಶೀರ್ವಾದ ಪಡೆಯುವ ಮೂಲಕ ವಿಶೇಷವಾಗಿ ರಕ್ಷಾಬಂಧನವನ್ನು ಆಚರಿಸಿದ್ದಾರೆ. ಫೋಟೋಗಳನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಹಾಗೂ ಪೂಜ್ಯರ ಆಶೀರ್ವಾದ ಪಡೆದು, ನಿನ್ನೆ ರಕ್ಷಾ ಬಂಧನದ ದಿನ ಅವರಿಗೆ ರಾಖಿ ಕಟ್ಟಿ ಆಶೀರ್ವಾದ ಪಡೆದ ನಾವು ಧನ್ಯ. ಶ್ರೀ ಮಂಜುನಾಥ ನಿಮ್ಮೆಲ್ಲರಿಗೂ ಒಳ್ಳೆಯದು ಮಾಡಲಿ ಅಂತ ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *