Sat. Mar 15th, 2025

Belthangadi: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

ಬೆಳ್ತಂಗಡಿ:(ಆ.24) ಬಿಎಂಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 17 ನೇ ಸಹಾಯಧನ ರೂ.10,000/ ವನ್ನು ಫ್ರೆಂಡ್ಸ್ ಆಟೋ ಚಾಲಕ ಮಾಲಕರ ಸಂಘ ಪಿಲಿಗೂಡು ಇದರ ಸದಸ್ಯರಾಗಿರುವ ಮಾಜಿ ಅಧ್ಯಕ್ಷರಾಗಿದ್ದ

ಇದನ್ನೂ ಓದಿ: 🔴ಕನ್ಯಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ನಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

ಬಾಬು ಪೂಜಾರಿ ಇವರು ಪಾರ್ಶ್ವವಾಯು ತೊಂದರೆಯಿಂದ ಬಳಲುತ್ತಿದ್ದು, ಇವರನ್ನು ಬೆನಕ ಆಸ್ಪತ್ರೆ ಉಜಿರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆ ಗೆ ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆ ಗೆ ದಾಖಲಿಸಿ ಚಿಕಿತ್ಸೆ ಪಡೆದು, ಈಗ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಬಿಎಂಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿಯ ಸದಸ್ಯರಾದ ಜಗದೀಶ್ ಶೆಟ್ಟಿ ಕಣಿಯೂರು ಅವರು ಈ ಸಹಾಯಧನದ ಮೊತ್ತವನ್ನು ಹಸ್ತಾಂತರಿಸಿದರು.

ಫ್ರೆಂಡ್ಸ್ ಆಟೋ ಚಾಲಕ ಮಾಲಕರ ಸಂಘ ಪಿಲಿಗೂಡು ಇದರ ಅಧ್ಯಕ್ಷರಾದ ಸೀತಾರಾಮ, ಸದಸ್ಯರಾದ ಚಿದಾನಂದ, ಬಾಲಕೃಷ್ಣ, ಉಮ್ಮರ್ ಕುಂಞ, ಕಾರ್ತಿಕ್ ಹಾಗೂ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ, ತಿಮ್ಮಪ್ಪ ಪೂಜಾರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *