Sat. Apr 19th, 2025

Mangalore: “ಐವನ್ ಡಿಸೋಜಾ ಓರ್ವ ಭಯೋತ್ಪಾದಕ, ತಾಕತ್ತಿದ್ರೆ ನನ್ನ ಮೇಲೆ ರೌಡಿಶೀಟ್ ಹಾಕಲಿ” ವೇದವ್ಯಾಸ ಕಾಮತ್ ಸವಾಲು!

ಮಂಗಳೂರು:(ಆ.24) ಐವನ್ ಡಿಸೋಜಾ ಓರ್ವ ಭಯೋತ್ಪಾದಕ. ತಾಕತ್ತಿದ್ದರೆ ನನ್ನ ಮೇಲೆ ರೌಡಿಶೀಟರ್ ಹಾಕಲಿ ನೋಡೋಣ ಎಂದು ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಸವಾಲು ಹಾಕಿದ್ದಾರೆ. ಕೆಲ ದಿನಗಳ ಹಿಂದೆ ಐವನ್ ಡಿಸೋಜಾ ವಿವಾದಾತ್ಮಕ ಹೇಳಿಕೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಐವನ್ ವರ್ಸಸ್ ಬಿಜೆಪಿ ಶಾಸಕರ ಸಮರ ಮುಂದುವರಿದಿದೆ.

ಇದನ್ನೂ ಓದಿ: 🛑ಪುತ್ತೂರು: ಪುತ್ತೂರಿನ ಚರ್ಚ್ ಬಳಿ ಎರಡು ಪ್ರತ್ಯೇಕ ಪ್ರಕರಣ

ಬಾಂಗ್ಲಾ ಮಾದರಿ ದಾಳಿ ಮಾಡುತ್ತೇವೆ ಎಂಬ ಡಿಸೋಜಾ ಹೇಳಿಕೆ ಸಂಬಂಧ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಕಾಂಗ್ರೆಸ್ ನ ನಾಯಕರಿಗೆ ತಾಕತ್ತಿದ್ರೆ ನನ್ನ ಮೇಲೆ ರೌಡಿಶೀಟ್ ಓಪನ್ ಮಾಡಲಿ.

ಕಾಂಗ್ರೆಸ್ ತಪ್ಪನ್ನು ತೋರಿಸಿದವರಿಗೆ ರೌಡಿಶೀಟರ್ ತೆರೆಯೋದು ಇವರ ಜಾಯಮಾನ. ಇಂತಹ ದೇಶದ್ರೋಹಿಗಳ ವಿರುದ್ಧ ಧ್ವನಿಯೆತ್ತಿದ್ರೆ ರೌಡಿಶೀಟರ್ ಕೇಸ್ ಹಾಕುವುದು ನಿಮ್ಮ ಡಿಎನ್‌ಎಯಲ್ಲೇ ಇದೆ. ಇದಕ್ಕೆಲ್ಲ ನಾವು ಹೆದರಲ್ಲ ಎಂದು ವಾಗ್ದಾಳಿ ನಡೆಸಿದರು.

ದೇಶದ್ರೋಹದ ಹೇಳಿಕೆ ನೀಡಿದ್ದನ್ನು ವಿರೋಧಿಸುವವರ ಮೇಲೆ ರೌಡಿಶೀಟರ್ ಹಾಕುತ್ತಿರಲ್ಲ ಹಾಗಿದ್ರೆ ರಾಜ್ಯಪಾಲರ ವಿರುದ್ಧ ಮಾತನಾಡಿದ, ರಾಜಭವನದ ಮೇಲೆ ಬಾಂಗ್ಲಾ ಮಾದರಿ ಉಗ್ರದಾಳಿ ನಡೆಸುವ ಬೆದರಿಕೆ ಹಾಕಿದ ಐವನ್ ಡಿಸೋಜಾ ಮೇಲೆ ಯಾವ ಶೀಟರ್ ಹಾಕಬೇಕು? ಅವರ ಮೇಲೆ ರೌಡಿ ಶೀಟರ್ ಅಲ್ಲ, ಐವನ್ ಓರ್ವ ಭಯೋತ್ಪಾದಕ ಎಂದೇ ಹೇಳಬೇಕು. ಭಯೋತ್ಪಾದಕರು ಬಾಂಗ್ಲಾದಿಂದ ನುಸುಳಿ ಬಂದು ಇಲ್ಲಿ ಇರ್ತಾರೆ. ಹಾಗಾಗಿ ವೇದವ್ಯಾಸ ಕಾಮತ್ ರೌಡಿಶೀಟರ್ ಆದ್ರೆ ಐವನ್ ಡಿಸೋಜ್ ಭಯೋತ್ಪಾದಕ. ಭಯೋತ್ಪಾದಕ ಐವನ್ ಡಿಸೋಜಾರಿಂದ ಬಿಜೆಪಿ ಕಲಿತುಕೊಳ್ಳುವಂತದ್ದು ಏನೂ ಇಲ್ಲ. ನೀವೇ ದೊಂಬಿ ಗಲಾಟೆ ಎಬ್ಬಿಸ್ತಿರಿ ಅನ್ನೋದು ರಾಜ್ಯಕ್ಕೆ ಗೊತ್ತಿದೆ ಎಂದು ತಿರುಗೇಟು ನೀಡಿದರು.

Leave a Reply

Your email address will not be published. Required fields are marked *