Wed. Apr 16th, 2025

Belthangadi: ಬೆಳಾಲು ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಬಡೆಕ್ಕಿಲ್ಲಾಯ ಮರ್ಡರ್ ಕೇಸ್ – ಆರೋಪಿಗಳನ್ನು ಆ.31ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

ಬೆಳ್ತಂಗಡಿ:(ಆ.27) ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳು ಮೂರು ದಿನ ನ್ಯಾಯಾಂಗ ಬಂಧನಲ್ಲಿದ್ದರು.

ಇದನ್ನೂ ಓದಿ: 🔴ತಮಿಳುನಾಡಿನ 8 ಮೀನುಗಾರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಇಂದು (ಆ.27) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು , ನ್ಯಾಯಾಧೀಶರು ಇಬ್ಬರು ಆರೋಪಿಗಳನ್ನು ಐದು ದಿನಗಳವರೆಗೆ (ಆ. 31 ರವರೆಗೆ) ಹೆಚ್ಚಿನ ತನಿಖೆಗಾಗಿ ಧರ್ಮಸ್ಥಳ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.

ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಕೊಲೆ ಮಾಡಿದ ಆರೋಪಿಗಳಾದ ಕೇರಳ ರಾಜ್ಯದ ಕಾಸರಗೋಡಿನ ಮುಳ್ಳೇರಿಯಾದ ನಿವಾಸಿ ಅಳಿಯ ರಾಘವೇಂದ್ರ ಕೆದಿಲಾಯ(53) ಮತ್ತು ಮೊಮ್ಮಗ ಮುರಳಿಕೃಷ್ಣ (21) ಅವರನ್ನು ಧರ್ಮಸ್ಥಳ ಪೊಲೀಸರು ಆ.24 ರಂದು ರಾತ್ರಿ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದರು.

ಆ.27 ರಂದು ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಯವರ ನೇತೃತ್ವದಲ್ಲಿ ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಹೆಚ್ಚಿನ ತನಿಖೆಗಾಗಿ ಏಳು ದಿನಗಳ ವರೆಗೆ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೋಲಿಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದು , ನ್ಯಾಯಾಧೀಶರು ಐದು ದಿನ ಧರ್ಮಸ್ಥಳ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದ್ದಾರೆ.

Leave a Reply

Your email address will not be published. Required fields are marked *