Mon. Jan 12th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

Mangalore Child kidnapped: ಆಟವಾಡುತ್ತಿದ್ದ ಹೆಣ್ಣು ಮಗುವಿನ ಅಪಹರಣ – ಎರಡೇ ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಮಂಗಳೂರು :(ಸೆ.2) ನಗರದ ಅಳಪೆ ಪಡೀಲ್ ನಲ್ಲಿರುವ ಅರಣ್ಯ ಇಲಾಖೆಯ ಸಸ್ಯವನ ಬಳಿ ಆ.31 ರಂದು ಸಂಜೆ ವೇಳೆಗೆ ಸುಮಾರಿಗೆ ಎರಡುವರೆ ವರ್ಷದ ಮಗು ಅಪಹರಣವಾದ ಘಟನೆ ನಡೆದಿದ್ದು ಘಟನೆ ನಡೆದ ಎರಡೇ ಗಂಟೆಯೊಳಗೆ ಪೊಲೀಸರು ಪ್ರಕರಣ ಭೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಎರ್ನಾಕುಲಂನ ಅನೀಶ್ ಕುಮಾರ್ (49) ಎಂಬಾತನನ್ನು ಬಂಧಿಸಲಾಗಿದೆ.

ಈತನು ತನ್ನ ಊರಿನಿಂದ ಆ. 28 ರಂದು ಮನೆಯಲ್ಲಿ ಗಲಾಟೆ ಮಾಡಿಕೊಂಡು ಮುಂಬೈಗೆ ರೈಲಿನಲ್ಲಿ ಹೋಗಿದ್ದು, ಗೋವಾದಲ್ಲಿ ರೈಲಿನಿಂದ ಇಳಿದು ಈತನು ಮುಂಬೈ ರೈಲನ್ನು ತಪ್ಪಿಸಿಕೊಂಡು ಆಗಸ್ಟ್ 31 ರಂದು ಗೋವಾದಿಂದ ಹೊರಟು ಮಂಗಳೂರಿಗೆ ಬಂದಿದ್ದಾನೆ.

ಪಡೀಲ್ ಆಳಪೆಯ ಅರಣ್ಯ ಭವನದ ಮುಂಭಾಗದಲ್ಲಿ ಒಂದು ಹೆಣ್ಣು ಮಗು ನಡೆದುಕೊಂಡು ಹೋಗುತ್ತಿದ್ದನ್ನು ನೋಡಿದ ಈತ ತನಗೆ ಹೆಣ್ಣು ಮಕ್ಕಳಿಲ್ಲವೆಂದು ಆಸೆಯಿಂದ ಈ ಹೆಣ್ಣು ಮಗುವನ್ನು ಕರೆದುಕೊಂಡು ಹೋಗಿದ್ದಾನೆ.

ಈ ಪ್ರಕರಣದಲ್ಲಿ ಆರೋಪಿಯು ಮಂಗಳೂರು ಜಂಕ್ಷನ್ ನ ರೈಲು ನಿಲ್ದಾಣದಿಂದ ಕಾಸರಗೋಡು ಕಡೆಗೆ ಹೋಗುವ ರೈಲಿನಲ್ಲಿ ಹೋಗಿರುವುದರ ಬಗ್ಗೆ ಮಾಹಿತಿಯನ್ನು ಪಡೆದ ಪೊಲೀಸರು ಕಾಸರಗೋಡಿನ ರೈಲ್ವೇ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ..

ತಕ್ಷಣ ಕಾರ್ಯ ಪ್ರವೃತ್ತರಾದ ಅವರು ಕಂಕನಾಡಿ ನಗರ ಪೊಲೀಸ್ ಠಾಣೆ ಠಾಣಾಧಿಕಾರಿಗಳ ಮಾರ್ಗದರ್ಶನದಂತೆ ಪಿ.ಎಸ್.ಐ ಶಿವಕುಮಾರ.ರ ಮತ್ತು ತಂಡವು ಕಾಸರಗೋಡಿಗೆ ತೆರಳಿ ಕಾಸರಗೋಡಿನ ರೈಲ್ವೇ ಪೊಲೀಸರ ಸಹಾಯದೊಂದಿಗೆ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಂಕನಾಡಿ ನಗರ ಠಾಣೆಯ ನಿರೀಕ್ಷಕರಾದ ಟಿ.ಡಿ ನಾಗರಾಜ್ ರವರ ಮಾರ್ಗದರ್ಶನದಲ್ಲಿ ಪಿ.ಎಸ್.ಐ ಶಿವಕುಮಾರ, ಎ.ಎಸ್.ಐ ಅಶೋಕ್ ಹಾಗೂ ಸಿಬ್ಬಂದಿಯವರಾದ ಅಶೀತ್ ಡಿ ಸೋಜಾ, ಕುಶಾಲ್ ಹೆಗ್ಡೆ, ರಾಘವೇಂದ್ರ, ಪೂಜಾ ರವರು ಆರೋಪಿ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *