Tue. Apr 8th, 2025

Belal: ಕೊಕ್ಕಡ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ‌ ಶ್ರೀ ಧ. ಮಂ‌. ಅನುದಾನಿತ ಪ್ರೌಢ ಶಾಲೆ ಬೆಳಾಲು ಶಾಲೆಗೆ ಹಲವಾರು ಪ್ರಶಸ್ತಿ

ಬೆಳಾಲು:(ಸೆ.14) ಶ್ರೀ ಧ. ಮಂ‌. ಅನುದಾನಿತ ಪ್ರೌಢ ಶಾಲೆ ಬೆಳಾಲು ಇಲ್ಲಿನ ವಿದ್ಯಾರ್ಥಿಗಳು ಉಜಿರೆ ಅನುಗ್ರಹ ಶಾಲೆಯಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಲವಾರು ಪ್ರಶಸ್ತಿ ಗಳಿಸಿದ್ದಾರೆ.

ಇದನ್ನೂ ಓದಿ: 🟣ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

ಹಿಂದಿ ಭಾಷಣದಲ್ಲಿ ಸೃಷ್ಟಿ 9ನೇ ತರಗತಿ ಪ್ರಥಮ, ತುಳು ಭಾಷಣದಲ್ಲಿ ರಕ್ಷಾ 9ನೇ ತರಗತಿ ಪ್ರಥಮ, ಗಝಲ್ ಸ್ಪರ್ಧೆಯಲ್ಲಿ ಐಶ್ವರ್ಯ ಎಂಟನೇ ತರಗತಿ ಪ್ರಥಮ, ಪ್ರಬಂಧ ಸ್ಪರ್ಧೆಯಲ್ಲಿ ಇಂದುಮತಿ ಹತ್ತನೇ ತರಗತಿ ದ್ವಿತೀಯ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ರಸಪ್ರಶ್ನೆ ಸ್ಪರ್ಧೆಯಲ್ಲಿ ಲೋಕೇಶ್ ಹತ್ತನೇ ತರಗತಿ ಮತ್ತು ಅಂಕಿತಾ 9ನೇ ತರಗತಿ ತೃತೀಯ ಸ್ಥಾನ ಪಡೆದುಕೊಂಡರು.

ವಿಜೇತರನ್ನು ಮುಖ್ಯೋಪಾಧ್ಯಾಯರಾದ ಶ್ರೀ ಜಯರಾಮ ಮಯ್ಯ ಹಾಗೂ ಶಿಕ್ಷಕರು ಅಭಿನಂದಿಸಿದರು.

Leave a Reply

Your email address will not be published. Required fields are marked *