Tue. Apr 8th, 2025

Nagamangala communal riots : ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್.ಐ.ಆರ್.!

ಮಂಡ್ಯ:(ಸೆ.19) ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ: 🔶Mangalore: ತುಳು ಎಂ.ಎ. ಪ್ರವೇಶಾತಿ ದಿನ ವಿಸ್ತರಣೆ

ನಾಗಮಂಗಲ ಕೋಮುಗಲಭೆಗೆ ಸಂಬಂಧಿಸಿದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ ಗಲಭೆಗೆ ಪ್ರಚೋದನೆ ಆರೋಪದಡಿ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನ ಬಂಧಿಸಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು.

ಬೆಂಗಳೂರಿನಲ್ಲಿ ನಡೆದ ಘಟನೆಯನ್ನ ನಾಗಮಂಗಲದಲ್ಲಿ ನಡೆದ ಘಟನೆ ಎಂದು ಆರೋಪಿಸಿದ್ದರು.


ನಾಗಮಂಗಲ ಘಟನೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪೋಸ್ಟ್ ಹಾಕಿದ್ದರು.

ಬೇರೆಡೆ ನಡೆದ 2 ವೀಡಿಯೋ ಲಗತ್ತಿಸಿ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಿ ನಾಗಮಂಗಲ ಟೌನ್ ಠಾಣೆಯಲ್ಲಿ ಅರ್ ಅಶೋಕ್ ಹಾಗೂ ಶೋಭಾ ಕರಂದ್ಲಾಜೆ ವಿರುದ್ಧ ಬಿಎನ್ ಎಸ್ ಸೆಕ್ಷನ್ 192ರ ಅಡಿ ಪೊಲೀಸರು ಎಫ್‌ಐಆ‌ರ್ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *