Thu. Apr 17th, 2025

Mangaluru: ದ.ಕ.ಜಿಲ್ಲೆಯಲ್ಲಿ ಕಾಲರಾ ರೋಗದ ಆತಂಕ – ಮೂಡಬಿದಿರೆ ತಾಲೂಕಿನ ವ್ಯಕ್ತಿಯೋರ್ವನಲ್ಲಿ ಸೋಂಕು ಪತ್ತೆ

ಮಂಗಳೂರು:(ಸೆ.21) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲರಾ ರೋಗದ ಆತಂಕ ಎದುರಾಗಿದೆ.

ಇದನ್ನೂ ಓದಿ: ⭕ಹಾಸನ: ಹೃದಯಾಘಾತದಿಂದ 11 ವರ್ಷದ ಬಾಲಕ ಸಾವು

ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮದ ವ್ಯಕ್ತಿಯೋರ್ವನಲ್ಲಿ ಕಾಲರಾ ಸೋಂಕು ಪತ್ತೆಯಾಗಿದೆ.

ಉಡುಪಿ ಜಿಲ್ಲೆಯ ಹೊಸ್ಮಾರುವಿನ ಹೋಟೆಲ್ ಒಂದರಿಂದ ಸೋಂಕು ಹರಡಿರುವ ಶಂಕೆ ವ್ಯಕ್ತವಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.


ಕಲುಷಿತ ಆಹಾರದಿಂದ ಕಾಲರಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹೋಟೆಲ್ ಮಾಲೀಕರ

ಜೊತೆ ಜಿಲ್ಲಾ ಆರೋಗ್ಯ ಇಲಾಖೆ ವಿಶೇಷ ಸಭೆ ನಡೆಸಿ ಕಡ್ಡಾಯವಾಗಿ ಆಹಾರ ಗುಣಮಟ್ಟದ ಬಗ್ಗೆ ಜಾಗ್ರತೆ ವಹಿಸಲು ಸೂಚನೆ ನೀಡಿದೆ.

Leave a Reply

Your email address will not be published. Required fields are marked *