Fri. Apr 11th, 2025

Belthangady : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಘೋಷಣೆ ಮಾಸಾಚರಣೆ ಕಾರ್ಯಕ್ರಮ

ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಘೋಷಣೆ ಮಾಸಾಚರಣೆ ಕಾರ್ಯಕ್ರಮ

ಬೆಳ್ತಂಗಡಿ (ಸೆ. 22) : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಘೋಷಣೆ ಮಾಸಾಚರಣೆ ಕಾರ್ಯಕ್ರಮ ನಡೆಸಲಾಯಿತು.

ಸಭೆಯಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸುಶ್ಮಿತಾ, ಆರ್ಥಿಕ ಸಾಕ್ಷರತೆ ಇಲಾಖೆಯ ಶ್ರೀಮತಿ ಉಷಾ ಕಾಮತ್, ಆರೋಗ್ಯ ಕಾರ್ಯಕರ್ತೆಯಾದ ಶ್ರೀಮತಿ ಪ್ರಮೀಳಾ, ಎಸ್. ಡಿ. ಎಂ. ಸಿ ಅಧ್ಯಕ್ಷರಾದ ಶ್ರೀ ದಿನೇಶ್ ಗೌಡ, ಪಂಚಾಯತ್ ಸದಸ್ಯರಾದ ಶ್ರೀ ಪ್ರವೀಣ್ ಗೌಡ, ಶ್ರೀಮತಿ ಶೋಭಾ ಹಾಗೂ ಶಾಲಾ ಮುಖ್ಯ ಶಿಕ್ಷಕಿಯಾದ ಧರ್ಣಮ್ಮ ಹಾಗೆಯೇ ಆಶಾ ಕಾರ್ಯಕರ್ತೆ ಶ್ರೀಮತಿ ಸರೋಜಿನಿ, ಮಕ್ಕಳ ಪೋಷಕರು, ಸ್ತ್ರೀ ಶಕ್ತಿ ಸದಸ್ಯರು ಹಾಜರಿದ್ದರು.

ಉಷಾ ಕಾಮತ್ ಅವರು ಪೋಷಣೆ ಅಭಿಯಾನದ ಕುರಿತು ಪ್ರಾಸ್ತವಿಕವಾಗಿ ಮಾತನಾಡಿದರು. ಆರೋಗ್ಯ ಕಾರ್ಯಕರ್ತೆ ಶ್ರೀಮತಿ ಪ್ರಮೀಳಾ ಅವರು ಆರೋಗ್ಯ ರಕ್ಷಣೆ ಕುರಿತು ಮಾಹಿತಿ ನೀಡಿದರು. ಆಶಾ ಕಾರ್ಯಕರ್ತೆ ಶ್ರೀಮತಿ ವಸಂತಿ ಕಾರ್ಯಕ್ರಮ ನಿರೂಪಿಸಿ, ಆಶಾ ಕಾರ್ಯಕರ್ತೆ ಶ್ರೀಮತಿ ಸರೋಜಿನಿ ಸ್ವಾಗತ ಭಾಷಣ ಮಾಡಿದರು. ಸ್ತ್ರೀ ಶಕ್ತಿ ಸದಸ್ಯೆ ಶ್ರೀಮತಿ ವಿದ್ಯಾ ಧನ್ಯವಾದ ಸಮರ್ಪಣೆ ನೆರವೇರಿಸಿದರು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು