ಮಂಗಳೂರು:(ಸೆ.24) ರಾತ್ರಿ ಸುರಿದ ಭಾರೀ ಮಳೆಗೆ ನಗರದ ಹೊರವಲಯ ಉಳ್ಳಾಲ ಟಿಸಿ ರೋಡ್ ಮುಳಿಗುಡ್ಡೆ ಎಂಬಲ್ಲಿ

ಇದನ್ನೂ ಓದಿ: ⛔ಇಂದು ಮುಡಾ ಕೇಸ್ ತೀರ್ಪು ಪ್ರಕಟಿಸಲಿದೆ ಹೈಕೋರ್ಟ್
ಮನೆಯ ಆವರಣ ಗೋಡೆ ಮೇಲೆ ಮಣ್ಣು ಕುಸಿದು ಬಿದ್ದಿದ್ದು, ಮನೆ ಮಂದಿ ಆತಂಕದಲ್ಲಿದ್ದಾರೆ. ಮನೆಯೊಂದು ಕುಸಿಯುವ ಭೀತಿ ಎದುರಾಗಿದೆ.

ರಾತ್ರಿ ಸುಮಾರು 2 ಘಂಟೆಗೆ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


ನಿನ್ನೆ ರಾತ್ರಿ ಮಂಗಳೂರು ಸೇರಿದಂತೆ ನಗರದ ಹೊರವಲಯದ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.

ಸ್ಥಳಕ್ಕೆ ಉಳ್ಳಾಲ ಪುರಸಭೆ ಅಧಿಕಾರಿಗಳು ಭೇಟಿ ನೀಡಿದ್ದು, ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸುವ ಕಾರ್ಯಾಚರಣೆ ಮಾಡುತ್ತಿದ್ದಾರೆ.

