Mon. Jan 12th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

Ujire: ಶ್ರೀ ಧ.ಮಂ.ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ – ಸೇವಾ ಮನೋಭಾವನೆ ಹಾಗೂ ರಾಷ್ಟ್ರಪ್ರೇಮ ಬೆಳೆಸಿಕೊಳ್ಳುವುದಕ್ಕೆ ಎನ್ನೆಸ್ಸೆಸ್ ಉತ್ತಮ ವೇದಿಕೆ – ಪ್ರೊ. ವಿಶ್ವನಾಥ ಪಿ.

ಉಜಿರೆ: (ಸೆ.26) ಗ್ರಾಮಸ್ವರಾಜ್ಯ ಹಾಗೂ ರಾಮ ರಾಜ್ಯದ ಕನಸು ಕಂಡ ಗಾಂಧೀಜಿಯವರು ಯುವಕರಲ್ಲಿ ಸೇವಾ ಮನೋಭಾವನೆ ಮೊದಲು ಬೆಳೆಯಬೇಕು ಎಂದು ಮನ ಮಾಡಿದರು ಮುಂದೆ ಇವರ ಜನ್ಮ ಶತಾಬ್ದಿಯ ಸಂದರ್ಭದಲ್ಲಿ ಪ್ರಾರಂಭಗೊಂಡಿದ್ದೆ ಈ ರಾಷ್ಟ್ರೀಯ ಸೇವಾ ಯೋಜನೆ.

ಇದನ್ನೂ ಓದಿ: 🟣ಉಜಿರೆ : ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ

ವ್ಯಕ್ತಿತ್ವ ವಿಕಸನ, ಶಿಸ್ತು, ಸಮಯಪಾಲನೆ, ಸಹಬಾಳ್ವೆ ಇತ್ಯಾದಿಗಳನ್ನು ಕಲಿತುಕೊಳ್ಳಲು ಇದು ಉತ್ತಮ ವೇದಿಕೆಯಾಗಿದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರದ ಡೀನ್ ಪ್ರೊ. ವಿಶ್ವನಾಥ ಪಿ. ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆಯ ಅಂಗವಾಗಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಗೊತ್ತು ಗುರಿ ಇಲ್ಲದ ಯುವ ಜನತೆಗೆ ಸರಿಯಾದ ಮಾರ್ಗದರ್ಶನ ನೀಡಲು ಇರುವ ಯೋಜನೆಯೇ ಈ ರಾಷ್ಟ್ರೀಯ ಸೇವಾ ಯೋಜನೆಯಾಗಿದೆ ಗ್ರಾಮೀಣ ಜೀವನದ ಪರಿಚಯವಾಗಬೇಕಾದರೆ ಇಂತಹ ಪ್ರಕಲ್ಪಗಳಲ್ಲಿ ಯುವಕರು ತೊಡಗಿಸಿ ಕೊಳ್ಳಬೇಕೆಂದು ಕರೆ ನೀಡಿದರು.

ಪ್ರಾಪ್ತಿ ಅವರು ರಾಷ್ಟ್ರೀಯ ಸೇವಾ ಯೋಜನೆಯ ಪರಿಚಯಾತ್ಮಕ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ನೂತನವಾದ ಸೂಚನಾ ಫಲಕವನ್ನು ಅನಾವರಣಗೊಳಿಸಲಾಯಿತು ಹಾಗೂ ರಾಷ್ಟ್ರೀಯ ಭಾವೈಕ್ಯತೆ ಶಿಬಿರದಲ್ಲಿ ಪಾಲ್ಗೊಂಡ ಸ್ವಯಂಸೇವಕಿ ಹರ್ಷಿತಾ ಅವರನ್ನು ಸನ್ಮಾನಿಸಲಾಯಿತು.

ರಾ.ಸೇ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಘಟಕದ ನಾಯಕರಾದ ಆದಿತ್ಯ ವಿ. , ಪ್ರಾಪ್ತಿ ಗೌಡ ಉಪಸ್ಥಿತರಿದ್ದರು.

ಆದಿ ಸ್ವಾಗತಿಸಿ , ಯಕ್ಷಿತ್ ವಂದಿಸಿದರು. ಕಾರ್ಯದರ್ಶಿ ಐಶ್ವರ್ಯ ನಿರೂಪಿಸಿದರು. ಸ್ವಯಂ ಸೇವಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *