ಕಾಸರಗೋಡು:(ಸೆ.30) ಭಾನುವಾರ ಸಂಜೆ ಆಟವಾಡುತ್ತಿದ್ದಾಗ ಮನೆಯಿಂದ ದಿಢೀರ್ ನಾಪತ್ತೆಯಾಗಿದ್ದ ಮೂರು ವರ್ಷದ ಬಾಲಕ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ವರದಿಯಾಗಿದೆ.

ಇದನ್ನೂ ಓದಿ: 🛑ಪುತ್ತೂರು: ತಿರುಪತಿ ಲಡ್ಡು ವಿವಾದ ಪ್ರಕರಣ
ಬೆದ್ರಡ್ಕ ಕಂಬಾರ ರಹ್ಮಾನಿಯಾ ಮಂಜಿಲ್ನ ನೌಶಾದ್ ಮತ್ತು ಶನಿಫಾ ದಂಪತಿಯ ಏಕೈಕ ಪುತ್ರ ಮುಹಮ್ಮದ್ ಸೌಹಾನ್ ಮೃತಪಟ್ಟ ಬಾಲಕ.


ಸೆ. 29ರ ಭಾನುವಾರ ಮಧ್ಯಾಹ್ನ ಮನೆಯಿಂದ ಮಗು ಕಾಣೆಯಾಗಿತ್ತು. ಮನೆಯವರು ಮತ್ತು ನೆರೆಹೊರೆಯವರು ಹುಡುಕಿದಾಗ ಕೆರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೂಡಲೇ ಬಾಲಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆ ಸಂಬಂಧ ಕಾಸರಗೋಡು ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.


