Wed. Apr 16th, 2025

Ujire: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ

ಉಜಿರೆ: (ಅ.2). ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ: 🔴ಧರ್ಮಸ್ಥಳ ಶ್ರೀ ಡಿ. ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

ಸಂಪನ್ಮೂಲ ವ್ಯಕ್ತಿಯಾಗಿ ಲಾಯಲ ಪಡ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಶಿಕ್ಷಕಿ ಶ್ರೀಮತಿ ರಾಜೇಶ್ವರಿ ಬಿ.ಎಸ್ ಇವರು ಆಗಮಿಸಿ ಮಕ್ಕಳಿಗೆ ಕುತೂಹಲಕಾರಿಯಾದ ಕಥೆ ಹಾಗೂ ಅಭಿನಯ ಗೀತೆಗಳೊಂದಿಗೆ ಕಲಿಕೆಯ ಬಗ್ಗೆ ಪ್ರಾಯೋಗಿಕವಾಗಿ ಮಾಹಿತಿ ನೀಡಿದರು.

ಒಂದು ಹಾಗೂ ಎರಡನೇ ತರಗತಿಯ ಸಂಯೋಜಕಿ ಶಮೀಮ್ ಬಾನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿ ಪೌಲಿನ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *