Fri. Jan 2nd, 2026

Udupi: ಬೈಕ್‌ ಗೆ ಕಾರು ಢಿಕ್ಕಿ – ವಿದ್ಯಾರ್ಥಿ ಮೃತ್ಯು

ಉಡುಪಿ:(ಅ.8) ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ ಎಂಜಿಎಂ ಕಾಲೇಜು ಎದುರಿನ ಡೈವರ್ಶನ್ ಪಾಯಿಂಟ್‌ನಲ್ಲಿ ನಡೆದಿದೆ.

ಇದನ್ನೂ ಓದಿ: 🟣ಕಾಶಿಪಟ್ಣ:(ಅ.12) ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕಾಶಿಪಟ್ಣ


ಮೃತರನ್ನು ಹಿರಿಯಡ್ಕ ನಿವಾಸಿ, ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್(18) ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಎಂ.ಜಿ.ಎಂ ಡೈವರ್ಶನ್ ಲ್ಲಿ ತಿರುವು ಪಡೆದು ಮಣಿಪಾಲ ಕಡೆಗೆ ಹೋಗುತ್ತಿದ್ದ ಬೈಕಿಗೆ ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಇದರಿಂದ ವೀರಜ್ ಬೈಕ್ ಸಮೇತ ರಸ್ತೆಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.

ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *