Wed. Apr 9th, 2025

Mangaluru: ಮೊಬೈಲ್‌ ಕಿತ್ತುಕೊಂಡ ಮನೆಯವರು – ಮನೆಯನ್ನೇ ತೊರೆದ ಮಗ!!

ಮಂಗಳೂರು :(ಅ.11) ಮನೆಯವರು ಮೊಬೈಲ್ ಅನ್ನು ಕಿತ್ತುಕೊಂಡಿದ್ದಕ್ಕೆ ಪಿಯುಸಿ ವಿದ್ಯಾರ್ಥಿಯೋರ್ವ ಮನೆ ಬಿಟ್ಟು ಹೋಗಿರುವ ಬಗ್ಗೆ ದೂರು ದಾಖಲಾಗಿದೆ.

ಇದನ್ನೂ ಓದಿ: ⭕ಮಂಗಳೂರು: ಇನ್ಸ್ಟಾಗ್ರಾಂ ನಲ್ಲಿ ವೀಡಿಯೋ ಲೈಕ್‌ ಮಾಡೋ ಮುಂಚೆ ಎಚ್ಚರ!!


ವಾಮಂಜೂರು ಸೈಂಟ್ ರೈಮಂಡ್ಸ್ ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ, ಮೇಗಿನಪೇಟೆ ನಿವಾಸಿ ಮುಹಮ್ಮದ್ ಯಾಸೀನ್ ಅಫ್ಘಾನ್ (16) ನಾಪತ್ತೆಯಾದಾತ.


ಈತನಿಗೆ ನಿರಂತರವಾಗಿ ಮೊಬೈಲ್ ನೋಡುವ ಚಟವಿತ್ತು. ಸೆ. 25ರಂದು ಮನೆಯಲ್ಲಿರುವಾಗ ಅವನ ಬಳಿಯಿದ್ದ ಮೊಬೈಲ್ ಅನ್ನು ಮನೆಯವರು ತೆಗೆದುಕೊಂಡಿದ್ದು, ಆ ವಿಚಾರವಾಗಿ ಮಾತುಕತೆ ನಡೆದಿತ್ತು.

ಅನಂತರ ಮನೆಯಿಂದ ಕಾಲೇಜಿಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ಮಹಮ್ಮದ್ ಯಾಸೀನ್ ಕಾಲೇಜಿಗೆ ಹೋಗದೆ ಮನೆಗೂ ಬಾರದೆ ನಾಪತ್ತೆಯಾಗಿದ್ದಾನೆ.

Leave a Reply

Your email address will not be published. Required fields are marked *