Fri. Apr 18th, 2025

Bengaluru: ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ – ಗೂಡ್ಸ್​​ ವಾಹನ ಹರಿದು 5 ವರ್ಷದ ಬಾಲಕ ಸಾವು

ಬೆಂಗಳೂರು(ಅ.13): ಗೂಡ್ಸ್​​ ವಾಹನ ಹರಿದು ಬಾಲಕನೋರ್ವ ಸಾವನ್ನ್ಪಪಿರುವ ಘಟನೆ ಬೆಂಗಳೂರಿನ ಕೆ.ಜಿ ಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ⭕ಉಡುಪಿ : ಉಡುಪಿ ಮೂಲದ ಉದ್ಯಮಿ ಆತ್ಮಹತ್ಯೆ!!

ತಾಹಿರ್ ಪಾಷಾ(5) ಮೃತ ಬಾಲಕ. ರಸ್ತೆಯಲ್ಲಿ ಓಡಿ ಬರುತ್ತಿದ್ದ ವೇಳೆ ಪಕ್ಕದಲ್ಲಿ ನಿಂತಿದ್ದ ಸ್ಕೂಟರ್​ಗೆ ಡಿಕ್ಕಿ ಹೊಡೆದು ಚಲಿಸುತ್ತಿದ್ದ ಗೂಡ್ಸ್ ವಾಹನದ ಕೆಳಗೆ ಬಿದ್ದಿದ್ದ. ಕೆಳಗೆ ಬಿದ್ದಾಗ ಗೂಡ್ಸ್ ವಾಹನದ ಹಿಂಬದಿಯ ಟೈಯರ್ ಹೊಡೆದು ತಲೆಗೆ ತೀವ್ರ ಗಾಯವಾಗಿತ್ತು.

ಕೂಡಲೇ ಸ್ಥಳೀಯರು ಮತ್ತು ಕುಟುಂಬದವರು ಹತ್ತಿರದ ಆಸ್ಪತ್ರೆಗೆ ಕರೆಯೊಯ್ದಿದ್ದರು. ಆಸ್ಪತ್ರೆಗೆ ಸಾಗಿಸುವ ಮೊದಲೇ ತಾಹಿರ್ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಸದ್ಯ ಘಟನೆ ಸಂಬಂಧ ಕೆಜಿ ಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *