ಕೊಪ್ಪಳ (ಅ.13): ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಬಸ್ಗಳಲ್ಲಿ ನಿತ್ಯ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆದೊಯ್ಯುವುದು ಚಾಲಕನ ಕರ್ತವ್ಯವಾಗಿದೆ.

ಇದನ್ನೂ ಓದಿ: 🔶ಮೊಗ್ರು : ಮುಗೇರಡ್ಕದ ಶ್ರೀ ರಾಮ ಶಿಶುಮಂದಿರದಲ್ಲಿ ವೈಭವದಿಂದ ನಡೆದ ಶಾರದಾ ಪೂಜೆ ಹಾಗೂ
ಚಾಲನೆ ಸಮಯದಲ್ಲಿ ಚಾಲಕ ಮೊಬೈಲ್ನಲ್ಲಿ ಮಾತನಾಡುವುದು, ಧೂಮಪಾನ ಮಾಡುವುದು ನಿಷೇಧಿಸಲಾಗಿದೆ. ಆದರೂ ಕೂಡ ನಿಪ್ಪಾಣಿ ಘಟಕದ ಬಸ್ ಚಾಲಕ ಧೂಮಪಾನ ಮಾಡುತ್ತ ವಾಹನ ಓಡಿಸಿದ್ದಾನೆ.
ನಿಪ್ಪಾಣಿ ಘಟಕಕ್ಕೆ ಸೇರಿದ ಕೆಎ 23, ಎಫ್ 1045 ನಂಬರ್ನ ಕೆಎಸ್ಆರ್ಟಿಸಿ ಬಸ್ ಗಂಗಾವತಿಯಿಂದ ಕೋಲ್ಹಾಪುರಕ್ಕೆ ತೆರಳುತ್ತಿತ್ತು. ಚಾಲಕ ಬೀಡಿ ಸೇದುತ್ತಾ ಬಸ್ ಚಲಾಯಿಸಿದ್ದಾನೆ.



ಚಾಲಕ ಧೂಮಪಾನ ಮಾಡುವುದನ್ನು ಪ್ರಯಾಣಿಕ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾನೆ. ಬಸ್ನಲ್ಲಿ ಧೂಮಪಾನ ನಿಷೇಧವಿದ್ದರೂ ಚಾಲಕ ಧೂಮಪಾನ ಮಾಡಿದ್ದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀಡಿ ಸೇದುತ್ತಾ ಬಸ್ ಚಾಲನೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
