Sat. Apr 12th, 2025

Mangalore: ಅಡುಗೆ ಕೋಣೆಗೆ ನುಗ್ಗಿದ ಚಿರತೆ!! ಆಮೇಲೆನಾಯ್ತು!!

ಮಂಗಳೂರು:(ಅ.22) ಚಿರತೆಯೊಂದು ಮನೆಯ ಅಡುಗೆ ಕೋಣೆಗೆ ಏಕಾಏಕಿ ನುಗ್ಗಿದ ಘಟನೆ ಮೂಲ್ಕಿಯಲ್ಲಿ ನಡೆದಿದೆ. ಮೂಲ್ಕಿಯ ಅಕ್ಕಸಾಲಿಕರ ಕೇರಿ ಬಳಿಯ ಸದಾನಂದ ಕೋಟ್ಯಾನ್ ಎಂಬವರ ಮನೆಯ ಅಡುಗೆ ಕೋಣೆಯೊಳಗೆ ಚಿರತೆ ನುಗ್ಗಿದೆ.

ಇದನ್ನೂ ಓದಿ: 🟣ಬೆಳ್ತಂಗಡಿ: (ಅ.26) ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆ

ಮೂಡಬಿದ್ರೆ ವಲಯದ ಅರಣ್ಯ ಅಧಿಕಾರಿಗಳ ಕಾರ್ಯಾಚರಣೆಯಿಂದ ಬೋನ್ ಮೂಲಕ ಚಿರತೆ ಸೆರೆ ಹಿಡಿಯಲಾಗಿದೆ. ಚಿರತೆ ನುಗ್ಗಿದ ವೇಳೆ ನಾಯಿ ಬೊಗಳಲು ಆರಂಭಿಸಿದ್ದು ಮನೆಮಂದಿ ಚಿರತೆ ನೋಡಿ ಕಂಗಾಲಾಗಿದ್ದಾರೆ.

ಕೂಡಲೇ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಅಡುಗೆ ಮನೆಯ ಮುಂಭಾಗ ಬಾಗಿಲಿಗೆ ಬೋನ್ ಅಳವಡಿಸಿ ಸುಮಾರು 5 ಗಂಟೆಗಳ ಬಳಿಕ ಚಿರತೆ ಬೋನಿನೊಳಗೆ ಬಿದ್ದಿದೆ. ಅರಣ್ಯಾಧಿಕಾರಿಗಳು, ಮೂಲ್ಕಿ ಪೊಲೀಸರು, ಸಾರ್ವಜನಿಕರು ಚಿರತೆ ಹಿಡಿಯಲು ಸಹಕರಿಸಿದ್ದಾರೆ.

Leave a Reply

Your email address will not be published. Required fields are marked *