Thu. Apr 17th, 2025

Puttur: ವಿಎಚ್ ಪಿ ಕಾರ್ಯಾಲಯ ಭೂಮಿ ಪೂಜೆಗೆ ಆಗಮಿಸಿದ ಅರುಣ್‌ ಪುತ್ತಿಲ -ಪುತ್ತಿಲ ಪರಿವಾರ ಹಾಗೂ ವಿಎಚ್ ಪಿ ಕಾರ್ಯಕರ್ತರ ನಡುವೆ ಮಾರಾಮಾರಿ – ಭೂಮಿ ಪೂಜೆಗೆ ಅರುಣ್ ಕುಮಾರ್ ಪುತ್ತಿಲ ಆಗಮಿಸಿದ್ದಕ್ಕೆ ಕೆರಳಿದ ವಿಎಚ್ ಪಿ ಕಾರ್ಯಕರ್ತರು

ಪುತ್ತೂರು :(ಅ.23) ವಿಶ್ವಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದ ಬಗ್ಗೆ ವರದಿಯಾಗಿದೆ.

ಇದನ್ನೂ ಓದಿ: ⭕ಮಂಗಳೂರು : 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮದ್ ಸಲೀಂ ಅರೆಸ್ಟ್

ಪುತ್ತೂರಿನ ಎಸ್ ಡಿಸಿಸಿ ಬ್ಯಾಂಕ್ ಮುಂಭಾಗದ ಈ ಹಿಂದಿನ ವಿಶ್ವ ಹಿಂದೂ ಪರಿಷದ್ ಕಾರ್ಯಾಲಯವಿದ್ದ ಸ್ಥಳದಲ್ಲಿ ಇಂದು ವಿಶ್ವಹಿಂದೂ ಪರಿಷದ್ ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಅರುಣ್ ಕುಮಾರ್ ಪುತ್ತಿಲ ಕೂಡ ಆಗಮಿಸಿದ್ದರೆನ್ನಲಾಗಿದೆ.

ಈ ವೇಳೆ ವಿಶ್ವಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರು ಪುತ್ತಿಲ ಆಗಮನಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದು ವಾಗ್ವಾದ ನಡೆದಿದೆ ತಿಳಿದು ಬಂದಿದೆ.

ಪುತ್ತಿಲ ಕಾರ್ಯಕ್ರಮಕ್ಕೆ ಆಗಮಿಸಿ ತೆರಳುವ ವೇಳೆ ಪುತ್ತಿಲ ಪರಿವಾರ ಕಾರ್ಯಕರ್ತರು ಹಾಗೂ ವಿಶ್ವಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರ ನಡುವೆ ಗದ್ದಲ ಉಂಟಾಗಿದ್ದು, ಬಳಿಕ ಕಾರ್ಯಕರ್ತರು ಪುತ್ತಿಲರನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಹೋದರು ಎಂದು ತಿಳಿದು ಬಂದಿದೆ.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪುತ್ತೂರು ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

Leave a Reply

Your email address will not be published. Required fields are marked *