Sat. Mar 15th, 2025

Chikkamagaluru: ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಪ್ರಾಣ ಬಿಟ್ಟ ಪ್ರವಾಸಿಗ!!

Chikkamagaluru:(ನ.4) ದೀಪಾವಳಿ ಹಿನ್ನೆಲೆ ಸಾಲು ಸಾಲು ರಜೆ ಇದ್ದ ಕಾರಣ ಸ್ನೇಹಿತರೊಂದಿಗೆ ಸೇರಿ ಹೆಬ್ಬೆ ಜಲಪಾತಕ್ಕೆ ಬಂದಿದ್ದ ಪ್ರವಾಸಿಗನೊಬ್ಬ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಜಲಪಾತದಲ್ಲಿ ಸಂಭವಿಸಿದೆ.

ಇದನ್ನೂ ಓದಿ: ಕುಂದಾಪುರ:‌ ಮನೆಯಲ್ಲಿ ಕೆಜಿಗಟ್ಟಲೆ ಗಾಂಜಾ ದಾಸ್ತಾನು

ಅಮಿತ್‌ ಕುಮಾರ್‌ (30) ಮೃತ ವ್ಯಕ್ತಿ. ಇವರು ಛತ್ತೀಸಘಡ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ವಾಸವಿದ್ದರು ಎನ್ನಲಾಗಿದೆ.

ಈತ ಭಾನುವಾರ ಸ್ನೇಹಿತರ ಜೊತೆ ಕೆಮ್ಮಣ್ಣು ಗುಂಡಿ ಸಮೀಪದ ಹೆಬ್ಬೆ ಜಲಪಾತಕ್ಕೆ ತೆರಳಿದ್ದು, ಈಜಲು ಹೋಗಿ ನೀರು ಪಾಲಾಗಿರುವ ಘಟನೆ ನಡೆದಿದೆ.

ಈ ಪ್ರಕರಣ ಸಂಬಂಧ ಲಿಂಗದಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು