Sat. Mar 15th, 2025

Mittabagilu: ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛ ಕಿಲ್ಲೂರು ಅಭಿಯಾನ

ಮಿತ್ತಬಾಗಿಲು: (ನ.14) ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಪ್ರಯುಕ್ತ ಸ್ವಚ್ಛ ಭಾರತ – ಸ್ವಚ್ಛ ಕಿಲ್ಲೂರು ಅಭಿಯಾನ ಅಂಗವಾಗಿ ವಿದ್ಯಾರ್ಥಿ ಸ್ವಯಂ ಸೇವಕರು ಕಿಲ್ಲೂರು ಪರಿಸರದ ಸ್ವಚ್ಛತೆ ಮಾಡಿದರು.

ಇದನ್ನೂ ಓದಿ: ⭕Mangaluru: ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾ*ವು


ಮಿತ್ತಬಾಗಿಲು ಗ್ರಾಮ ಪಂಚಾಯತ್ ಇದರ ಗ್ರಾಮಾಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಅವರು ಸ್ವಚ್ಛತಾ ಅಭಿಯಾನವನ್ನು ಉದ್ಘಾಟಿಸಿದರು.

ಬೆಳ್ತಂಗಡಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್ ಹೆಚ್.ಕೆ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯೆ ರಜಿಯಾ ಅತಿಥಿಯಾಗಿ ಭಾಗವಹಿಸಿದ್ದರು.

ಶಾಲಾ ಹಳೆ ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಜಯಶ್ರೀ , ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ, ರಾ. ಸೇ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಘಟಕದ ನಾಯಕರಾದ ಆದಿತ್ಯ ವಿ ಹಾಗೂ ಪ್ರಾಪ್ತಿ ಗೌಡ ಮತ್ತು ವಿದ್ಯಾರ್ಥಿ ಸ್ವಯಂ ಸೇವಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *