Wed. Apr 16th, 2025

Karkala: ಪತಿಯ ಸಾವಿನಿಂದ ಮನನೊಂದು ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ!! – ತಂದೆ – ತಾಯಿ ಇಲ್ಲದೆ ಅನಾಥರಾದ ಇಬ್ಬರು ಮಕ್ಕಳು!!

ಕಾರ್ಕಳ :(ನ.16) ಪತಿಯ ಸಾವಿನಿಂದ ನೊಂದು ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಿಯ್ಯಾರು ಕುಂಟಿಬೈಲ್ ಮಂಜಡ್ಕ ಎಂಬಲ್ಲಿ ನಡೆದಿದೆ. ಸೌಮ್ಯ(39) ಮೃತ ಮಹಿಳೆ.

ಇದನ್ನೂ ಓದಿ: 🚘ಬೆಳ್ತಂಗಡಿ:‌ ಬೆಳ್ತಂಗಡಿ ಭಾರತ್ ಆಟೋ ಕಾರ್ಸ್ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝಿರ್ ಮಾರುಕಟ್ಟೆಗೆ!!

ಸೌಮ್ಯ ಅವರ ಪತಿ 1 ತಿಂಗಳ ಹಿಂದೆ ತೀರಿಕೊಂಡಿದ್ದರು. ಇದರಿಂದ ನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಿಯ್ಯಾರು ಚರ್ಚ್ ಬಳಿಯ ಅಂಗನವಾಡಿಯಲ್ಲಿ ಟೀಚರ್ ಆಗಿ ಕಳೆದ 15 ವರ್ಷಗಳಿಂದ ಸೌಮ್ಯ ಕರ್ತವ್ಯ ನಿರ್ವಹಿಸುತ್ತಿದ್ದರು.


ಪತಿಯ ನಿಧನದ ಬಳಿ ಸೌಮ್ಯ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗಿದೆ. ಇದೇ ನೋವಿನಲ್ಲಿ ಸೌಮ್ಯ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮೊದಲೇ ಸೌಮ್ಯ ಪತಿ ನಿಧನವಾಗಿದ್ದು, ಇದೀಗ ಸೌಮ್ಯ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದು, ತಾಯಿ ತಂದೆ ಇಲ್ಲದೇ ಸೌಮ್ಯ ಅವರ ಇಬ್ಬರು ಹೆಣ್ಣುಮಕ್ಕಳು ಅನಾಥರಾಗಿದ್ದಾರೆ.

Leave a Reply

Your email address will not be published. Required fields are marked *