Tue. Apr 8th, 2025

Puttur: ಕಾರ್ಮಿಕನ ಶವ ರಸ್ತೆಯಲ್ಲಿ ಬಿಟ್ಟು ಹೋದ ಪಿಕಪ್ ಡ್ರೈವರ್! – ಅಷ್ಟಕ್ಕೂ ಆಗಿದ್ದೇನು?!!

ಪುತ್ತೂರು:(ನ.17) ಸಹಾಯಕ ಕೂಲಿ ಕಾರ್ಮಿಕನ ಮೃತ ದೇಹವನ್ನು ಪಿಕಪ್ ವಾಹನದಲ್ಲಿ ತಂದು ಮನೆಯ ಮುಂದಿನ ರಸ್ತೆ ಸಮೀಪ ಮಲಗಿಸಿ ಹೋದ ಘಟನೆಯೊಂದು ಸಾಲ್ಮರ ಸಮೀಪದ ಕೆರೆಮೂಲೆಯಲ್ಲಿ ನ.16ರಂದು ನಡೆದಿದ್ದು, ಘಟನೆಗೆ ಸಂಬಂಧಿಸಿ ಮಾಲಕರ ವಿರುದ್ಧ ಮನೆ ಮಂದಿ ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ⭕Kasaragodu : ನಾಟಕ ತಂಡದ ಕಲಾವಿದರು ಪ್ರಯಾಣಿಸುತ್ತಿದ್ದ ಬಸ್ ಅಪಘಾತ


ಮೃತರ ಪುತ್ರಿ ಪೊಲೀಸರಿಗೆ ದೂರನ್ನೂ ನೀಡಿದ್ದಾರೆ. ಸಾಲ್ಮರ ಕೆರೆಮೂಲೆ ನಿವಾಸಿ ಸಿಮೆಂಟ್ ಸಾರಣೆ ಮೇಸ್ತ್ರಿ ಜೊತೆ ಸಹಾಯಕರಾಗಿ ಹೋಗುತ್ತಿದ್ದ ಕೂಲಿ ಕಾರ್ಮಿಕ, ಪರಿಶಿಷ್ಟ ಜಾತಿಗೆ ಸೇರಿದ ಶಿವಪ್ಪ (69)ರವರು ಮೃತಪಟ್ಟವರು.


ತಂದೆ ಶಿವಪ್ಪ ಅವರು ನ.16ರಂದು ಬೆಳಿಗ್ಗೆ ಮನೆಯಲ್ಲಿದ್ದ ಸಂದರ್ಭ ಸಾಲ್ಮರ ತಾವೋ ಇಂಡಸ್ಟ್ರೀಸ್‌ ಹೆನ್ರಿ ತಾವೋ ಅವರು ಕೆಲಸಕ್ಕೆಂದು ಪಿಕಪ್ ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ.

ಮಧ್ಯಾಹ್ನದ ವೇಳೆ ಅದೇ ಪಿಕಪ್ ವಾಹನದಲ್ಲಿ ಅವರನ್ನು ಕರೆದುಕೊಂಡು ಬಂದು ರಸ್ತೆ ಬದಿಯಲ್ಲಿ ಮಲಗಿಸಿ ಹೋಗಿದ್ದಾರೆ. ಈ ವೇಳೆ ಮನೆಯಲ್ಲಿ ನಾನು ಮತ್ತು ನನ್ನ ತಾಯಿ ಇದ್ದು ತಕ್ಷಣ ರಸ್ತೆ ಬದಿ ಹೋಗಿ ನೋಡಿದಾಗ ತಂದೆ ಶಿವಪ್ಪ ಮೃತಪಟ್ಟಿದ್ದರು.

Leave a Reply

Your email address will not be published. Required fields are marked *