Sat. Mar 15th, 2025

Belthangady: ಅನಾರೋಗ್ಯದಿಂದ ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ..!

ಬೆಳ್ತಂಗಡಿ :(ನ.19) ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ಅನಾರೋಗ್ಯ ಹಿನ್ನೆಲೆ ನ. 19ರಂದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: 🟣ಸುಬ್ರಹ್ಮಣ್ಯ: ಕುಕ್ಕೆಗೆ ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಭೇಟಿ

ವಿಜಯವಾಣಿ ದಿನ ಪತ್ರಿಕೆಯಲ್ಲಿ ಹಲವು ವರ್ಷಗಳ ಕಾಲ ಕೆಲಸ ನಿರ್ವಹಿಸಿದ್ದರು.

ಸದ್ಯ ಬೆಳ್ತಂಗಡಿಯ ವಾರ ಪತ್ರಿಕೆ ಸುದ್ದಿಬಿಡುಗಡೆಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಹೊಟ್ಟೆ ನೋವು ಮತ್ತು ವಾಂತಿ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು.

ಪಿತ್ತಕೋಶದಲ್ಲಿ ಕಲ್ಲು ಇದ್ದಿದ್ದರಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಈ ಮಧ್ಯೆ ಅವರು ನಿಧನರಾಗಿದ್ದಾರೆ. ಭುವನೇಂದ್ರ ಪುದುವೆಟ್ಟು ಒಬ್ಬ ಅದ್ಭುತ ಕೆಲಸಗಾರ, ಮೆಲು ಮಾತಿನ ಸರಳ ವ್ಯಕ್ತಿಯಾಗಿ ಎಲ್ಲರೊಂದಿಗೆ ಒಡನಾಟ ಹೊಂದಿದ್ದರು.

Leave a Reply

Your email address will not be published. Required fields are marked *