Wed. Jan 14th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

Bengaluru: ಅಣ್ಣ ಪ್ರೀತಿ ಮಾಡಿ ತಪ್ಪು ಮಾಡ್ಬಿಟ್ಟೆ – ಎರಡೇ ವರ್ಷದಲ್ಲಿ ಲವ್‌ ಮ್ಯಾರೇಜ್‌ ಆ#ತ್ಮಹತ್ಯೆಯಲ್ಲಿ ಅಂತ್ಯ – ಅಣ್ಣನಿಗೆ ಸೆಂಡ್ ಮಾಡಿದ ಡೆತ್​ನೋಟ್​​ ನಲ್ಲಿ ಕಾದಿತ್ತು ಆ#ತ್ಮಹತ್ಯೆ ರಹಸ್ಯ!! – ಮಗಳ ಚೊಚ್ಚಲ ಬಾಣಂತನದ ನಿರೀಕ್ಷೆಯಲ್ಲಿದ್ದ ಕುಟುಂಬಸ್ಥರಿಗೆ ಶಾಕ್! – ಅಷ್ಟಕ್ಕೂ ನಡೆದಿದ್ದೇನು?

ಬೆಂಗಳೂರು:(ನ.24) 2 ವರ್ಷದ ಹಿಂದೆ ತಾನೇ ಅವರಿಬ್ಬರೂ ಪ್ರೀತಿ ಮಾಡಿ ಮದುವೆ ಆಗಿದ್ದರು. ಆದರೆ ಯುವತಿ ಯಾಕೋ ತನ್ನ ಪ್ರೀತಿಯ ಅಣ್ಣನಿಗೆ ಕೊನೆಯ ಪತ್ರ ಬರೆದು ಸೂಸೈಡ್ ಮಾಡಿಕೊಂಡಿದ್ದಾರೆ, ಅಷ್ಟಕ್ಕೂ ನಡೆದಿದ್ದೇನು ಗೊತ್ತಾ? ಹಾಗಿದ್ರೆ ಈ ಸ್ಟೋರಿ ನೋಡಿ!

ಇದನ್ನೂ ಓದಿ: 🛑ಸಕಲೇಶಪುರ: ಮುಜಾವರ್ ಪೀಠದ ಒಳಗೆ ಹಾಕಿರುವ ಹೂವು – ಗಂಧ ಅರಿಶಿನ ಕುಂಕುಮ ತೆಗೆಯುತ್ತಿರುವುದು ಕಾನೂನು ಬಾಹಿರ

ಗಂಡನ ಮನೆಯವರು ನೀಡಿದ ಕಿರುಕುಳಕ್ಕೆ ಬೇಸತ್ತು ಯುವತಿ ಸಾವಿನ ಮನೆ ಸೇರಿದ್ದು, ಮಗಳ ಚೊಚ್ಚಲ ಬಾಣಂತನದ ನಿರೀಕ್ಷೆಯಲ್ಲಿದ್ದ ಕುಟುಂಬಸ್ಥರಿಗೆ ಶಾಕ್ ನೀಡಿದ್ದಾಳೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಗುಮ್ಮನಹಳ್ಳಿ ನಿವಾಸಿ ಸುರೇಶ್ ಜೊತೆ ಕಳೆದ 2 ವರ್ಷದಿಂದಷ್ಟೆ ಹಸೆಮಣೆ ಏರಿದ್ದ ರೂಪ ಮೃತ ಗರ್ಭಿಣಿ. ಆರು ತಿಂಗಳ ಗರ್ಭಿಣಿಯಾಗಿದ್ದ ರೂಪ ಹೊಟ್ಟೆಯಲ್ಲಿನ ಮಗು ಕಣ್ಣು ತೆರೆಯುವ ಮುನ್ನವೇ ತಾಯಿ ಹೊಟ್ಟೆಯಲ್ಲಿನ ಮಗು ಸಮೇತ ಪರಲೋಕ ಸೇರಿದ್ದಾರೆ.

ಅಂದಹಾಗೆ ಕಳೆದ ಎರಡು ವರ್ಷಗಳ ಹಿಂದೆ ಪರಸ್ಪರ ಎರಡು ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದ ರೂಪ ಮತ್ತು ಸುರೇಶ್ ಆರು ತಿಂಗಳವರೆಗೂ ಸುಖ ಸಂಸಾರ ಮಾಡಿದ್ದಾರೆ.

ಆದರೆ ಆರು ತಿಂಗಳು ಕಳೆಯುತ್ತಿದ್ದಂತೆ ನನಗೆ ಸಾಲಗಾರರ ಕಾಟ ಜಾಸ್ತಿಯಾಗುತ್ತಿದೆ. ಮದುವೆಗೆ ಸಾಲ ಮಾಡಿದ್ದು, ಬೇರೆ ಹುಡುಗಿಯನ್ನು ಮದುವೆಯಾಗಿದ್ದರೆ ಹೆಚ್ಚಿನ ವರದಕ್ಷಿಣೆ ಸಿಗುತ್ತಿತ್ತು. ಸಾಲ ತೀರುತ್ತಿತ್ತು ಅಂತ ಗಂಡ ಮತ್ತು ಅತ್ತೆ-ಮಾವ ಕಿರುಕುಳ ನೀಡಲು ಆರಂಭಿಸಿದ್ದರಂತೆ.

ಅಲ್ಲದೆ ಪದೇ ಪದೇ ತವರು ಮನೆಗೆ ಹೋಗಿ ಹಣ ತೆಗೆದುಕೊಂಡು ಬಾ ಅಂತ ತವರು ಮನೆಗೆ ಕಳಿಸುತ್ತಿದ್ದ ಕಾರಣ ರೂಪ ಬೇಸತ್ತಿದ್ದಾಳೆ. ಇನ್ನೂ ಪದೇ ಪದೇ ಇದೇ ರೀತಿ ಹಲವು ಭಾರೀ ಹಣಕ್ಕೆ ಅತ್ತೆ ಮಾವ ಸೇರಿದಂತೆ ಪ್ರೀತಿಸಿ ಮದುವೆಯಾದ ಗಂಡನು ಕಿರುಕುಳ ನೀಡಿದ್ದು, ತವರು ಮನೆಯವರು ಅಡ್ಜೆಸ್ಟ್ ಮಾಡಿಕೊಂಡು ಬಾಳಮ್ಮ ಅಂದಿದ್ರಂತೆ.

ಜೊತೆಗೆ ಇದೇ ನೆಪದಲ್ಲಿ ಪದೇ ಪದೇ ಊಟ ಸೇರಿದಂತೆ ಸಣ್ಣ ಪುಟ್ಟ ವಿಚಾರಕ್ಕೂ ಗಂಡನ ಮನೆಯವರು ರೂಪಾಗೆ ಕಿರುಕುಳ ನೀಡುತ್ತಿದ್ದರಂತೆ. ಇನ್ನೂ ಗಂಡನ ಮನೆಯವರ ಕಿರುಕುಳ ತಾಳಲಾರದೆ ಬೇಸತ್ತ ತುಂಬು ಗರ್ಭಿಣಿ ರೂಪ ಗಂಡನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ,

ಆತ್ಮಹತ್ಯೆಗೆ ಶರಣಾಗುವ ಮುನ್ನ ಬುಕ್ ಒಂದರಲ್ಲಿ ಡೆತ್‌ ನೋಟ್‌ ಬರೆದಿಟ್ಟಿದ್ದಾಳೆ. ಪ್ರೀತಿಯ ಅಣ್ಣನಿಗೆ ತಂಗಿ ಮಾಡುವ ನಮಸ್ಕಾರಗಳು. ಅಣ್ಣ ನಾನು ನಿನ್ನ ಮಾತು ಕೇಳದೆ ತಪ್ಪು ಮಾಡಿ ಈ ಮದುವೆ ಆದೆ. ಆದರೆ ನಾನು ಮದುವೆ ಆಗಿ 2 ವರ್ಷದಿಂದ ಒಂದು ದಿನವು ನನಗೆ ಇಲ್ಲಿ ನೆಮ್ಮದಿಯಿಲ್ಲ. ನನ್ನ ಜೀವನಕ್ಕೆ ನರಕವಾಗಿದೆ.

ಇನ್ನೂ ನನಗೆ ಬದುಕಲು ಇಷ್ಟವಿಲ್ಲ. ಸಾಧ್ಯವಾದರೆ ಕ್ಷಮಿಸು. ಮುಂದಿನ ಜನ್ಮವಿದ್ದರೆ ನಿನ್ನ ಋಣ ತೀರಿಸುತ್ತೇನೆ. ಅಪ್ಪ, ಅಮ್ಮ, ಅಜ್ಜಿಗೆ ನನ್ನ ಕೊನೆಯ ನಮನಗಳು. ನನ್ನ ಸಾವಿಗೆ ದಯವಿಟ್ಟು ನ್ಯಾಯ ಕೊಡಿಸು. ನನ್ನ ಸಾವಿಗೆ ಅತ್ತೆ, ಮಾವ, ನನ್ನ ಗಂಡ ಮತ್ತು ಗಂಡನ ಮನೆಯವರೇ ಕಾರಣ. ನನ್ನ ಅತ್ತೆ ದೇವಮ್ಮ, ಮಾಮ ನರಸಿಂಹಮೂರ್ತಿ ಮತ್ತು ಗಂಡ ಸುರೇಶ್ ಇವರಿಗೆ ಶಿಕ್ಷೆ ಕೊಡಿಸಿ ನನಗೆ ನ್ಯಾಯ ಕೊಡಿಸಿ ಅಣ್ಣ ದಯವಿಟ್ಟು. ಇಂತಿ ನಿಮ್ಮ ಪ್ರೀತಿಯ ತಂಗಿ ರೂಪ ರತ್ನಮ್ಮ ಜಿಆರ್ ಎಂದು ಡೆತ್ ನೋಟ್ ಬರೆದು ಅಣ್ಣನಿಗೆ ವಾಟ್ಸ್ ಆಪ್ ಮೂಲಕ ಫೋಟೋ ಕಳಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *