Sat. Apr 19th, 2025

New Delhi: ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ರಾಜ್ಯಸಭೆಯಲ್ಲಿ ಜನ್ಮದಿನದ ಶುಭಾಶಯ

ನವದೆಹಲಿ :(ನ.25) ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಹೀಗಾಗಿ ಧರ್ಮಸ್ಥಳದಲ್ಲಿ ಸಂಭ್ರಮ ಕಳೆ ಕಟ್ಟಿದೆ. ಪೂಜ್ಯ ಖಾವಂದರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಇದನ್ನೂ ಓದಿ: 🟠ಬೆಳ್ತಂಗಡಿ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

ರಾಜ್ಯ ಸಭಾ ಸದಸ್ಯರಾಗಿರುವ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ರಾಜ್ಯಸಭೆಯಲ್ಲಿ ಜನ್ಮದಿನದ ಶುಭಾಶಯ ಕೋರಲಾಯಿತು.

ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಸಭಾಪತಿ ಶ್ರೀ ಜಗದೀಪ್ ಧನಕ‌ರ್ ಅವರು ರಾಜ್ಯಸಭೆಯಲ್ಲಿಂದು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ಮಾನ್ಯ ರಾಜ್ಯ ಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಜನ್ಮದಿನದ ಶುಭಾಶಯ ಕೋರಿದರು.

ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದ ದೇವಸ್ಥಾನ ಮೂಲಕ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದ್ದಾರೆ. ಒಂದು ಪುಟ್ಟ ಹಳ್ಳಿಯನ್ನು ಅತ್ಯಧಿಕ ಭಕ್ತರು ಭೇಟಿ ನೀಡುವಂತೆ ಮಾಡಿದ್ದಾರೆ. ಹಳ್ಳಿಗಳಲ್ಲಿ ಅಭಿವೃದ್ದಿಯ ಮೂಲಕ ಕ್ರಾಂತಿಯನ್ನು ಮಾಡಿದ್ದಾರೆ ಎಂದರು.

Leave a Reply

Your email address will not be published. Required fields are marked *