ಬಂದಾರು :(ಡಿ.2.) ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ವಠಾರದಲ್ಲಿ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ ನಡೆಯಿತು.

ಇದನ್ನೂ ಓದಿ: 💠ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್
ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ ನಾಗಂದೋಡಿ ಅಧ್ಯಕ್ಷತೆ ವಹಿಸಿದರು.
ಬಾಲಕೃಷ್ಣ ಪೂಜಾರಿ ಬಜಗುತ್ತು ಕೊಯ್ಯರು ಮಾತನಾಡುತ್ತಾ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ವಿವಿಧ ವಿಭಾಗದ ಸಮಿತಿ ಪದಾಧಿಕಾರಿಗಳು, ಸ್ವಯಂ ಸೇವಕರು ಮನಃಪೂರ್ವಕವಾಗಿ ತೊಡಗಿಸಿಕೊಂಡು ತಮ್ಮ ಕರ್ತವ್ಯವನ್ನು ಸೇವೆ ಎಂದು ತಿಳಿದು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.


ಶ್ರೀ ಕ್ಷೇತ್ರ ಆರಿಕೋಡಿ ಧರ್ಮದರ್ಶಿಗಳಾದ ಹರೀಶ್ ಅವರು ಮಾರ್ಗದರ್ಶನ ನೀಡಿ ಅರಿಕೋಡಿ ಶ್ರೀ ಕ್ಷೇತ್ರದ ಮೂಲಕ ಬ್ರಹ್ಮ ಕಲಶೋತ್ಸವ ಪುಣ್ಯ ಕಾರ್ಯಕ್ರಮಕ್ಕೆ ಸಂಪೂರ್ಣವಾಗಿ ಸಹಕಾರ ನೀಡುವುದಾಗಿ ಹೇಳಿದರು.
ದೇವಸ್ಥಾನದ ಪ್ರಧಾನ ಅರ್ಚಕರಾದ ಅನಂತರಾಮ ಶಬರಾಯ, ಅಭಿವೃದ್ಧಿ ಸಮಿತಿ, ಬ್ರಹ್ಮ ಕಲಶೋತ್ಸವ ಸಮಿತಿ, ಮಹಿಳಾ ಸಮಿತಿ ಹಾಗೂ ವಿವಿಧ ಸಮಿತಿ ಸಂಚಾಲಕ- ಸಹಸಂಚಾಲಕರು ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅನುವಂಶಿಕ ಮೊಕ್ತೇಸರರು ಕುಕ್ಕುಪ್ಪ ಗೌಡ, ತಿಮ್ಮಪ್ಪ ಗೌಡ ಸೋಣಕುಮೇರು, ಅಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು ಉಪಸ್ಥಿತರಿದ್ದರು.
