Tue. Jan 13th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

Belal: ಬೆಳಾಲು ಶ್ರೀ.ಧ. ಮಂ.ಅ. ಪ್ರೌ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

ಬೆಳಾಲು:(ಡಿ.14) ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆಯು ಡಿ.13 ರಂದು ನಡೆಯಿತು.

ಇದನ್ನೂ ಓದಿ: ಮಂಗಳೂರು : ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಸಿಕ್ಕಿಬಿದ್ದ ಪಿಡಿಒ .!!


ಪ್ರತಿಭಾ ದಿನಾಚರಣೆಯ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ಬಹುಮಾನವನ್ನು ಬೆಳಾಲು ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ ವಿತರಿಸಿ, “ಎಲ್ಲರೂ ಸ್ಪರ್ಧೆ ನೀಡಿದಾಗ ಮಾತ್ರ ಪ್ರತಿಭೆ ಇರುವರು ವಿಜಯಗಳಾಗಬಹುದು. ನಾವು ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಪ್ರತಿಭೆಯನ್ನು ವಿಕಾಸ ಪಡಿಸುವಂತಿರಬೇಕು” ಎಂದು ತಿಳಿಸಿದರು.

ವೇದಿಕೆಯಲ್ಲಿ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಭವಾನಿ ಮಾರ್ಪಾಲು ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ಶಶಿಧರ ಓಡಿಪ್ರೊಟ್ಟು ಇವರು ಬಹುಮಾನವನ್ನು ವಿತರಿಸಿ, ಶುಭ ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕ ಶ್ರೀ ಜಯರಾಮ ಮಯ್ಯ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದ ಈ ಕಾರ್ಯಕ್ರಮದಲ್ಲಿ, ಶಿಕ್ಷಕಿ ಕುಮಾರಿ ಶ್ರೇಯ ಶ್ರೀ ವಂದಿಸಿ, ಶಿಕ್ಷಕಿ ಶ್ರೀಮತಿ ಕೋಕಿಲ ನಿರೂಪಿಸಿದರು. ಶಿಕ್ಷಕ ಶ್ರೀ ಗಣೇಶ್ವರ್ ಹಾಗೂ ಶ್ರೀ ಕೃಷ್ಣಾನಂದ ಇವರು ಕ್ರಮವಾಗಿ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು. ಶಾಲಾ ನಾಯಕ ಶ್ರೀ ಲೋಕೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಬಳಿಕ ಬೆಳಾಲು ಶ್ರೀ ಲಕ್ಷ್ಮಣಗೌಡ ಇವರಿಂದ ತರಬೇತಿ ಪಡೆದ ವಿದ್ಯಾರ್ಥಿಗಳಿಂದ ಶಶಿ ಪ್ರಭಾ ಪರಿಣಯ ಯಕ್ಷಗಾನ ಬಯಲಾಟ ನಡೆಯಿತು. ನಂತರ ಎಲ್ಲಾ ವಿದ್ಯಾರ್ಥಿಗಳು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರಚುರಪಡಿಸಿದರು. ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀ ಧನ್ಯ ಕುಮಾರ್ ಎಂ ಇವರು ಉಪಸ್ಥಿತರಿದ್ದು, ಶಾಲೆಯ ವಾರ್ಷಿಕ ಸಂಚಿಕೆ ವಿದ್ಯಾರ್ಥಿ ಹಸ್ತಪ್ರತಿ ‘ನವ್ಯ ಜ್ಯೋತಿ’ ಇದನ್ನು ಬಿಡುಗಡೆಗೊಳಿಸಿ ಶಾಲೆಯ ವಿಶೇಷ ಪ್ರತಿಭೆಗಳನ್ನು ಪುರಸ್ಕರಿಸಿದರು.

ಯಕ್ಷಗಾನ ನಾಟ್ಯ ತರಬೇತಿಯ ಗುರುಗಳಾದ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ಲಕ್ಷ್ಮಣ ಗೌಡ ಪಿ., ಕರಾಟೆ ತರಬೇತುದಾರ ಶ್ರೀ ಮಿಥುನ್ ಮತ್ತು ವರ್ಗಾವಣೆಗೊಂಡ ಶಿಕ್ಷಕ ಶ್ರೀ ಜಗದೀಶ್ ಇವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು. ಕಳೆದ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಾಧಕರನ್ನು ಹಾಗೂ

ಈ ವರ್ಷ ರಾಜ್ಯಮಟ್ಟದಲ್ಲಿ ಕಣಾದ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದ ಕುಮಾರಿ ಇಂದುಮತಿ ಹಾಗೂ ಕರಾಟೆ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಭಾಗವಹಿಸಿದ ಕುಮಾರಿ ಜಾಹ್ನವಿ ಇವರನ್ನು ಸ್ಮರಣಿಕೆ ನೀಡಿ ಗುರುತಿಸಲಾಯಿತು. ಎಸ್ ಡಿ ಎಮ್ ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಶ್ರೀ ಸುರೇಶ್ ಹಾಗೂ ಎಸ್ ಡಿ ಎಮ್ ಪ್ರೌಢಶಾಲೆ ಪೆರಿಂಜೆಯ ಮುಖ್ಯ ಶಿಕ್ಷಕ ಶ್ರೀ ಮುಕುಂದ ಚಂದ್ರ ಹಾಗೂ ಹಳೆ ಪೇಟೆ ಉಜಿರೆಯ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಪ್ರತಿಮಾ ಮತ್ತು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯ ಶ್ರೀ ದಯಾನಂದ ಪಿ ಬೆಳಾಲು ಇವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ,ಪ್ರತಿಭೆಗಳನ್ನು ಗೌರವಿಸಿದರು.

Leave a Reply

Your email address will not be published. Required fields are marked *