Wed. Apr 16th, 2025

Tenkakarandur: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ಕರೆಂಟ್ ಶಾಕ್ ಹೊಡೆದು 9 ನೇ ತರಗತಿ ವಿದ್ಯಾರ್ಥಿ ಸಾವು

ತೆಂಕಕಾರಂದೂರು :(ಡಿ.19) ವಿದ್ಯಾರ್ಥಿಯೊಬ್ಬ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ತೆಂಕಕಾರಂದೂರು ಪೆರೋಡಿತ್ತಾಯನ ಕಟ್ಟೆ ಬಳಿ ನಡೆದಿದೆ.

ಇದನ್ನೂ ಓದಿ: ಸಕಲೇಶಪುರ: ಕೋಳಿಗಳಿಗೆ ವಿಷ ಇಟ್ಟು ಕೊಂದ ಕಿರಾತಕರು


ತೆಂಕಕಾರಂದೂರು ಪೆರೋಡಿತ್ತಾಯನ ಕಟ್ಟೆ ಶಾಲಾ ಬಳಿಯ ಮನೆಯ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಸ್ಟೀಪನ್ (14) ಕ್ರಿಸ್ ಮಸ್ ಹಬ್ಬದ ಪ್ರಯುಕ್ತ

ಸಂಜೆ ಮನೆಗೆ ಕ್ರಿಸ್ ಮಸ್ ಕರೋಲ್ (ಸಾಂತಕ್ರೊಸ್) ಬರುವ ಹಿನ್ನೆಲೆಯಲ್ಲಿ ಮನೆಗೆ ಅಲಂಕಾರ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಅಷ್ಟೊತ್ತಿಗಾಗಲೇ ಮೃತ ಪಟ್ಡಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *