Wed. Jan 14th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

Puttur: ಉಪ ಲೋಕಾಯುಕ್ತ ವೀರಪ್ಪ.ಬಿ ಪುತ್ತೂರಿಗೆ ಭೇಟಿ – ಸರ್ಕಾರಿ ಆಸ್ಪತ್ರೆ, ವಿದ್ಯಾರ್ಥಿ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ – ಹಾಸ್ಟೆಲ್ ವಾರ್ಡನ್ ನನ್ನು ತರಾಟೆಗೆತ್ತಿಕೊಂಡ ಉಪ ಲೋಕಾಯುಕ್ತರು

ಪುತ್ತೂರು:(ಡಿ.22) ಉಪ ಲೋಕಾಯುಕ್ತ ವೀರಪ್ಪ ಬಿ ಅವರು ಭಾನುವಾರ ಪುತ್ತೂರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಪುತ್ತೂರು ಸರ್ಕಾರಿ ಆಸ್ಪತ್ರೆ, ಹಾರಾಡಿ ಸಮಾಜ ಕಲ್ಯಾಣ ಇಲಾಖಾ ವಿದ್ಯಾರ್ಥಿನಿಯರ ನಿಲಯ, ಬೀರಮಲೆಯ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಉಡುಪಿ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ LPC ವಾರಂಟ್ ಆಸಾಮಿ ಅರೆಸ್ಟ್!!

ವಿದ್ಯಾರ್ಥಿ ನಿಲಯ ಸಮಸ್ಯೆ ಪರಿಹರಿಸಲು ಸೂಚನೆ:
ನಗರದ ಹಾರಾಡಿ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ವೇಳೆಯಲ್ಲಿ ಇಲ್ಲಿನ ವಿದ್ಯಾರ್ಥಿನಿಯರಿಗೆ ಸರಿಯಾದ ಸಮಯಕ್ಕೆ ಊಟದ ವ್ಯವಸ್ಥೆ ಸಿಗದ ಬಗ್ಗೆ, ಹಾಸ್ಟೆಲ್ ಸುರಕ್ಷತೆಗಾಗಿ ಆವರಣ ಬೇಲಿ ಇಲ್ಲದಿರುವ ಬಗ್ಗೆ, ಗ್ಯಾಸ್ ಸಿಲಿಂಡರ್ ಇಡಲು ಪ್ರತ್ಯೇಕ ಕೊಠಡಿ ಇಲ್ಲದಿರುವ ಬಗ್ಗೆ ಹಾಗೂ ವಿದ್ಯಾರ್ಥಿನಿಯರಿಗೆ ಓದಲು ಸರಿಯಾದ ಲೈಬ್ರೇರಿ ವ್ಯವಸ್ಥೆ ಇಲ್ಲದರ ಬಗ್ಗೆ ವಿದ್ಯಾರ್ಥಿಗಳು ಲೋಕಾಯುಕ್ತರಿಗೆ ದೂರು ನೀಡಿದರು.

ಈ ಸಂದರ್ಭದಲ್ಲಿ ಹಾಸ್ಟೆಲ್ ಅವ್ಯವಸ್ಥೆ ಬಗ್ಗೆ ಸಿಡಿಮಿಡಿಗೊಂಡ ಉಪ ಲೋಕಾಯುಕ್ತರು ಹಾಸ್ಟೆಲ್ ವಾರ್ಡನ್ ಅವರನ್ನು ತರಾಟೆಗೆತ್ತಿಕೊಂಡರು. ಸರ್ಕಾರದ ಅನುದಾನದಲ್ಲಿ ನಡೆಯುತ್ತಿರುವ ಹಾಸ್ಟೆಲ್‍ಗಳನ್ನು ಸರಿಯಾಗಿಟ್ಟುಕೊಳ್ಳದಿದ್ದಲ್ಲಿ, ಮಕ್ಕಳ ಸುರಕ್ಷತೆಯನ್ನು ಕಾಪಾಡುವಲ್ಲಿ ವಿಫಲವಾದಲ್ಲಿ ಸುಮೋಟೋ ಕೇಸು ದಾಖಲಿಸಿಕೊಳ್ಳುವುದಾಗಿ ಎಚ್ಚರಿಸಿದರು.

ವಿದ್ಯಾರ್ಥಿನಿಯರಿಗೆ ಅಗತ್ಯವಾದ ಊಟದ ವ್ಯವಸ್ಥೆಯನ್ನು ಸರಿಯಾದ ಸಮಯದಲ್ಲಿ ನೀಡಬೇಕು. ಹಾಸ್ಟೆಲ್ ಗ್ರಂಥಾಲಯಕ್ಕೆ ಹೆಚ್ಚಿನ ಪಠ್ಯ ಪುಸ್ತಕ ತರುವಲ್ಲಿ ಕ್ರಮ ವಹಿಸಬೇಕು. ವಿದ್ಯಾರ್ಥಿನಿಯರ ಭದ್ರತೆಯ ದೃಷ್ಠಿಯಿಂದ ಹಾಸ್ಟೆಲ್‍ನ ಸುತ್ತಲೂ ಆವರಣಕ್ಕೆ ಬೇಲಿಯನ್ನ ಒಂದು ವಾರದ ಒಳಗೆ ಹಾಕಿಸಬೇಕು ಸಂಬಂಧಪಟ್ಟ ಅಧಿಕಾರಿಗಳಿಗೆ ಫೋನ್ ಮೂಲಕ ಕರೆ ಮಾಡಿ ಸೂಚಿಸಿದರು.

ಒಂದು ವಾರದ ಒಳಗೆ ಎಲ್ಲಾ ವ್ಯವಸ್ಥೆ ಸರಿಪಡಿಸದಿದ್ದಲ್ಲಿ ವಾರ್ಡನ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸುಮೋಟೊ ಕೇಸ್ ದಾಖಲಿಸುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಬಳಿಕ ನಗರದ ಬೀರಮಲೆ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಉಪಲೋಕಾಯುಕ್ತರು ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದರು. ವಿದ್ಯಾರ್ಥಿಗಳ ಬೇಡಿಕೆಯನ್ನು ಆಲಿಸಿದ ಅವರು ಸಮಸ್ಯೆಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಲಾಗುವುದು. ಈ ಹಿನ್ನಲೆಯಲ್ಲಿ ಪುತ್ತೂರಿಗೆ ಆಗಮಿಸಿದ್ದು, ಭಾನುವಾರ ಆಗಿರುವ ಕಾರಣ ಇಲಾಖೆಗಳಿಗೆ ಭೇಟಿ ನೀಡಲು ಸಾಧ್ಯವಾಗಿಲ್ಲ. ಪುತ್ತೂರಿನ ಸರ್ಕಾರಿ ಆಸ್ಪತ್ರೆ ಹಾಗೂ ಹಾಸ್ಟೆಲ್‍ಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಅರಿತುಕೊಳ್ಳಲಾಗಿದೆ. ಹಾಸ್ಟೆಲ್‍ಗಳಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಮುಖ್ಯವಾಗಿದೆ. ಅಲ್ಲದೆ ಮಕ್ಕಳಿಗೆ ಕಲಿಕೆ ಪೂರಕ ಉತ್ತಮ ವಾತಾವರಣ ಬೇಕಾಗಿದೆ. ಸರ್ಕಾರದ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಉಪ ಲೋಕಾಯುಕ್ತರಾದ ವೀರಪ್ಪ ಬಿ ಹೇಳಿದರು.

ಈ ಸಂದರ್ಭದಲ್ಲಿ ಲೋಕಾಯುಕ್ತ ಎಸ್ಪಿ ನಟರಾಜ್, ಡಿವೈಎಸ್ಪಿ ಗಾನಾ ಪಿ ಕುಮಾರ್, ಇನ್ಸ್ಪೆಕ್ಟರ್‍ಗಳಾದ ಅಮಾನುಲ್ಲಾ, ಸುರೇಶ್ ಮತ್ತು ಚಂದ್ರಶೇಖರ್, ಮತ್ತಿತ್ತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *