Tue. Apr 8th, 2025

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಹೊಂಡಕ್ಕೆ ಬಿದ್ದ ಕಾರು – ಐವರಿಗೆ ಸಣ್ಣಪುಟ್ಟ ಗಾಯ

ಉಡುಪಿ:(ಡಿ.27) ನಗರದ ಅಂಬಲಪಾಡಿ ಹೆದ್ದಾರಿ ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಹೊಂಡಕ್ಕೆ ಕಾರು ಮಗುಚಿಬಿದ್ದು ಮೊದಲ ಅಪಘಾತ ದಾಖಲಾಗಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ‌.

ಇದನ್ನೂ ಓದಿ: ಬಜಿರೆ: ಜಾಗದ ವಿಷಯದಲ್ಲಿ ಎರಡು ಕುಟುಂಬಗಳ ನಡುವೆ ಹೊಡೆದಾಟ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಮಗುಚಿಬಿದ್ದ ಘಟನೆ ಅಂಬಲಪಾಡಿ ಜಂಕ್ಷನ್ ಬಳಿ ಇಂದು ಮುಂಜಾನೆ 3 ಗಂಟೆಗೆ ಸಂಭವಿಸಿದೆ.


ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಕೇರಳ ನೋಂದಣಿ ಸಂಖ್ಯೆ ಹೊಂದಿರುವ ಕಾರಿನಲ್ಲಿ ಐದು ಮಂದಿ ಪ್ರಯಾಣಿಕರು ಕೊಲ್ಲೂರಿಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ ನಲ್ಲಿ ಮೇಲ್ಸೇತುವೆಯ ಪಿಲ್ಲರ್ ನಿರ್ಮಿಸಲು ಬಹೃತ್ ಹೊಂಡ ಅಗೆಯಲಾಗಿದ್ದು, ವಾಹನ ಸವಾರರು ಜಾಗರೂಕರಾಗಿರಬೇಕಿದೆ.

Leave a Reply

Your email address will not be published. Required fields are marked *