ಕಾರ್ಕಳ:(ಫೆ.4) ಬಾವನ ಮೇಲೆ ಭಾಮೈದ ಮಾರಾಕಾಸ್ತ್ರದಿಂದ ದಾಳಿ ಮಾಡಿದ ಘಟನೆ ಕಾರ್ಕಳದ ಶಿವತಿಕೆರೆಯಲ್ಲಿ ನಡೆದಿದೆ.
![](https://uplustv.com/wp-content/uploads/2025/02/muli.jpg)
ಮಹಮ್ಮದ್ ರಿಜ್ವಾನ್ ಗಂಭೀರವಾಗಿ ಗಾಯಗೊಂಡ ವ್ಯಕ್ತಿ.
ಮಹಮ್ಮದ್ ರಿಜ್ವಾನ್ಗೆ ಆತನ ಹೆಂಡತಿಯ ಅಣ್ಣ ಅಶ್ರಫ್ ಕತ್ತಿಯಿಂದ ಕಡಿದು ಗಂಭೀರವಾಗಿ ಗಾಯಗೊಳಿಸಿರುವ ಪರಿಣಾಮದಿಂದ ತಲೆ, ಕುತ್ತಿಗೆ, ಕಾಲಿಗೆ ಗಂಭೀರ ಗಾಯವಾಗಿದ್ದು,
![](https://uplustv.com/wp-content/uploads/2025/02/51b5a0cd-f9b6-499f-a45b-f15e5ee2ea78-1024x1024.jpg)
![](https://uplustv.com/wp-content/uploads/2025/02/057b1d26-13c1-450b-9ca4-33b6e7226863-810x1024.jpg)
![](https://uplustv.com/wp-content/uploads/2025/02/u-plus-poster.jpg)
ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 2017 ರಲ್ಲಿ ರಿಜ್ವಾನ್ಗೆ ಅಶ್ರಫ್ನ ತಂಗಿ ಮೈಮುನಾಳನ್ನು ಕೊಟ್ಟು ಮದುವೆ ಮಾಡಿಸಲಾಗಿತ್ತು. 2023 ರಲ್ಲಿ ಮೈಮುನಾ ಗಂಡನ ಮನೆಯವರ ಕಿರುಕುಳ ಸಹಿಸದೆ ಆತ್ಮಹತ್ಯೆ ಮಾಡಿಕೊಂಡಿದ್ದಳು.
![](https://uplustv.com/wp-content/uploads/2025/02/WhatsApp-Image-2024-07-12-at-16.54.12_23b03a5a.jpg)
ಮೈಮುನಾ ತನ್ನ ಅತ್ತೆ, ಮಾವ, ಇತರ ಕುಟುಂಬದ ಸದಸ್ಯರು ಮಾನಸಿಕ ಹಿಂಸೆ ನೀಡುತ್ತಿರುವ ಕುರಿತು ಈ ಹಿಂದೆ ದೂರು ನೀಡಿದ್ದಳು. ಈ ಪ್ರಕರಣ ಇನ್ನೊಂದು ಹಿಂಸಾತ್ಮಕ ರೂಪ ಪಡೆದುಕೊಂಡಿದೆ.
![](https://uplustv.com/wp-content/uploads/2025/02/WhatsApp-Image-2024-10-18-at-11.21.38_8ae796c7-667x1024.jpg)