Wed. Feb 5th, 2025

Puttur: ಬೈಕ್‌ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಸಾವು

ಪುತ್ತೂರು:(ಫೆ.5) ಪುತ್ತೂರಿನ ಹೊರವಲಯ ಮುರ ಎಂಬಲ್ಲಿ ಬೈಕ್‌ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್‌ ಸವಾರ ಮೃತ ಹೊಂದಿದ್ದಾರೆ.

ಚೇತನ್‌ ಕೆಮ್ಮಿಂಜೆ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಖಾಸಗಿ ವಾಹಿನಿಯೊಂದರಲ್ಲಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕಡಬ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಎಂಬಲ್ಲಿ ಬೈಕ್‌ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿ ಚೇತನ್‌ ಅವರ ಜೊತೆ ಇನ್ನೋರ್ವ ಬಾಲಕ ಇದ್ದಿದ್ದು ತಿಳಿದು ಬಂದಿದೆ.

ಚೇತನ್‌ ಅವರು ನೆಹರೂ ನಗರದ ಮತಾವುನಲ್ಲಿರುವ ತನ್ನ ಸಂಬಂಧಿಕರ ಮನೆಗೆಂದು ಬಂದಿದ್ದು, ಅಲ್ಲಿಂದ ಬಾಲಕನನ್ನು ಚುರುಮುರಿ ತಿನ್ನಿಸಲೆಂದು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

ಸವಾರ ಮತ್ತು ಬಾಲಕ ಅಪಘಾತದ ಸಂದರ್ಭದಲ್ಲಿ ಡಾಮಾರು ರಸ್ತೆಗೆ ಎಸೆಯಲ್ಪಟ್ಟಿದ್ದು, ಬಾಲಕ ಅಪಾಯದಿಂದ ಪಾರಾಗಿರುವ ಕುರಿತು ವರದಿಯಾಗಿದೆ.

ಚೇತನ್‌ ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಬದುಕುಳಿಯಲಿಲ್ಲ ಎಂದು ತಿಳಿದು ಬಂದಿದೆ. ಬಾಲಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *