Wed. Apr 16th, 2025

Venur: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನ ವಿದ್ಯಾರ್ಥಿಗಳಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

ವೇಣೂರು:(ಫೆ.5) ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜು ನಿಟ್ಟಡೆ ವೇಣೂರಿನಲ್ಲಿ ಫೆ. 04 ರಂದು ಎ.ಜೆ. ಆಸ್ಪತ್ರೆಯ ಡಾಕ್ಟರ್ ಆರ್ಥಿಕಾ ಶೆಟ್ಟಿ ಮತ್ತು ಸಿಬ್ಬಂದಿಯಾದ ಅಭಿರಾಮ್ ಇವರು ಕುಂಭಶ್ರೀ ವಿದ್ಯಾ ಸಂಸ್ಥೆಯ ಆರನೇ,

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಪ್ರೀತಿಸಿ ಮದ್ವೆಯಾಗಿದ್ದ ಜೋಡಿ ಬಾಳಲ್ಲಿ ಅನುಮಾನದ ಬಿರುಗಾಳಿ

ಏಳನೇ, ಪ್ರೌಢಶಾಲಾ , ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಬಹಳ ಸಂಕ್ಷಿಪ್ತವಾಗಿ ಮಾಹಿತಿಯನ್ನು ನೀಡಿದರು.

ಶಾಲಾ ಸಂಚಾಲಕರಾದ ಲೆಪ್ಟಿನೆಂಟ್ ಶ್ರೀ ಅಶ್ವಿತ್ ಕುಲಾಲ್ ಇವರನ್ನು ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ ಮೇಡಂ,

ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತ ಅಶೋಕ್, ಹಿರಿಯ ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *