ಮಂಗಳೂರು:(ಫೆ.6) ಮಸಾಜ್ ಪಾರ್ಲರ್ ಮೇಲಿನ ದಾಳಿ ಪ್ರಕರಣದಲ್ಲಿ ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ರಾಮಸೇನಾ ಕರ್ನಾಟಕ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 11 ಮಂದಿಗೆ ಜಾಮೀನು ಸಿಕ್ಕಿದೆ.
![](https://uplustv.com/wp-content/uploads/2025/02/muli.jpg)
ಇದನ್ನೂ ಓದಿ: ಬಿಹಾರ: ಪ್ರೀತಿಸಿ ಮದುವೆಯಾದ ಕೆಲವೇ ಕ್ಷಣಗಳಲ್ಲಿ ಪತ್ನಿಗೆ ಕಪಾಳಮೋಕ್ಷ ಮಾಡಿದ ಗಂಡ
ಏನಿದು ಪ್ರಕರಣ?:
ಜ.23ರಂದು ಮಂಗಳೂರಿನ ಬಿಜೈನಲ್ಲಿರುವ ಮಸಾಜ್ ಪಾರ್ಲರ್ನಲ್ಲಿ ಅನೈತಿಕ ಚಟುವಟಿಕೆ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿ, ರಾಮಸೇನಾ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿದ್ದರು. ಈ ಬಗ್ಗೆ ಮಸಾಜ್ ಪಾರ್ಲರ್ ಮಾಲೀಕರು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದಾಳಿಯ ಹಿನ್ನೆಲೆಯಲ್ಲಿ ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಯನ್ನು ಬರ್ಕೆ ಪೊಲೀಸರು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
![](https://uplustv.com/wp-content/uploads/2025/02/51b5a0cd-f9b6-499f-a45b-f15e5ee2ea78-1024x1024.jpg)
![](https://uplustv.com/wp-content/uploads/2025/02/057b1d26-13c1-450b-9ca4-33b6e7226863-810x1024.jpg)
![](https://uplustv.com/wp-content/uploads/2025/02/u-plus-poster.jpg)
![](https://uplustv.com/wp-content/uploads/2025/02/WhatsApp-Image-2024-07-12-at-16.54.12_23b03a5a.jpg)
ಬಂಧಿತರಿಗೆ ಮಂಗಳೂರು 6ನೇ ಜೆಎಂಎಫ್ ಸಿ ನ್ಯಾಯಾಲಯ ಫೆ.7ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಬಳಿಕ ಆರೋಪಿಗಳ ಪರ ವಕೀಲರು ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. 14ಮಂದಿ ಆರೋಪಿಗಳಲ್ಲಿ ಜಾಮೀನು ಅರ್ಜಿ ಸಲ್ಲಿಸದ ಮೂರು ಮಂದಿ ಆರೋಪಿಗಳನ್ನು ಹೊರತುಪಡಿಸಿ ನ್ಯಾಯಾಲಯವು 11 ಮಂದಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
![](https://uplustv.com/wp-content/uploads/2025/02/WhatsApp-Image-2024-10-18-at-11.21.38_8ae796c7-667x1024.jpg)