ಪುತ್ತೂರು:(ಫೆ.6) ಮುಸುಕುಧಾರಿಗಳಿಂದ ಕೆಡವಲ್ಪಟ್ಟ ಬಿಜೆಪಿ ಮುಖಂಡನ ಮನೆಯಲ್ಲಿ ಪೋಲೀಸ್ ಮಹಜರು ಸಂದರ್ಭದಲ್ಲಿ ಚಿನ್ನಾಭರಣ ಪತ್ತೆಯಾಗಿದೆ. ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹೆಸರಿನಲ್ಲಿ ದೇವಸ್ಥಾನದ ಆವರಣದಲ್ಲಿರುವ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ.
![](https://uplustv.com/wp-content/uploads/2025/02/WhatsApp-Image-2024-10-18-at-11.21.38_8ae796c7-1-667x1024.jpg)
ಈ ನಡುವೆ ದೇವಸ್ಥಾನದ ಜಾಗದಲ್ಲಿ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಎಂಬವರ ಮನೆಯಲ್ಲಿ ಮುಸುಕುಧಾರಿಗಳ ತಂಡ ನುಗ್ಗಿ ಜೆಸಿಬಿ ಮೂಲಕ ಮನೆಯನ್ನು ನೆಲಸಮ ಮಾಡಿತ್ತು.
![](https://uplustv.com/wp-content/uploads/2025/02/51b5a0cd-f9b6-499f-a45b-f15e5ee2ea78-1-1024x1024.jpg)
![](https://uplustv.com/wp-content/uploads/2025/02/057b1d26-13c1-450b-9ca4-33b6e7226863-1-810x1024.jpg)
ಈ ಸಂಬಂಧ ಮನೆ ಯಜಮಾನ ರಾಜೇಶ್ ಬನ್ನೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮತ್ತು ಇತರರ ವಿರುದ್ಧ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಿಸಿದ್ದರು.
![](https://uplustv.com/wp-content/uploads/2025/02/muli-1.jpg)
ಪ್ರಕರಣದ ತನಿಖೆ ಆರಂಭಿಸಿದ ಪೋಲೀಸರು ಘಟನಾ ಸ್ಥಳದಲ್ಲಿ ಮಹಜರು ನಡೆಸುವ ಸಂದರ್ಭದಲ್ಲಿ ಮನೆ ಅವಶೇಷದಡಿ ಚಿನ್ನಾಭರಣ ಪತ್ತೆಯಾಗಿದೆ.
![](https://uplustv.com/wp-content/uploads/2025/02/u-plus-poster-1.jpg)
ಘಟನೆ ನಡೆಸಿದ ಸಂದರ್ಭದಲ್ಲಿ ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದು ಹಣವಿದ್ದು, ಮನೆಯ ಜಗಲಿಯಲ್ಲಿದ್ದ ನಾಯಿ ಮರಿಗಳನ್ನೂ ಕೊಂದು ಹಾಕಲಾಗಿದೆ ಎಂದು ಪೋಲೀಸ್ ದೂರಿನಲ್ಲಿ ರಾಜೇಶ್ ಬನ್ನೂರು ಉಲ್ಲೇಖಿಸಿದ್ದರು.
![](https://uplustv.com/wp-content/uploads/2025/02/WhatsApp-Image-2024-07-12-at-16.54.12_23b03a5a-1.jpg)