ಉಡುಪಿ:(ಫೆ.6) ಮರಕ್ಕೆ ಕಾರು ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿ, ನಾಲ್ವರಿಗೆ ಗಾಯಗಳಾಗಿರುವ ಘಟನೆ ಕೊಕ್ಕರ್ಣೆ ಸಮೀಪದ ಕಾಡೂರಿನಗೋಳಿಕಟ್ಟೆ ಬಳಿಯ ತಿರುವಿನಲ್ಲಿ ಸಂಭವಿಸಿದೆ.
ಬೀಜಾಡಿಯ ಜಯಲಕ್ಷ್ಮೀ (65) ಮೃತ ಮಹಿಳೆ. ಕಾರಿನಲ್ಲಿದ್ದ ರಾಮಚಂದ್ರ ಭಟ್, ಸುಜಾತಾ, ಮಂಗಳಾ ಹಾಗೂ ಪ್ರೇಮಾ ಗಾಯಗೊಂಡಿದ್ದಾರೆ. ಅವರು ಹೆಬ್ರಿ ಕಬ್ಬಿನಾಲೆ ಜಾತ್ರೆ ಮುಗಿಸಿ ಮಂದಾರ್ತಿಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.