ಬಂಟ್ವಾಳ :(ಫೆ.7) ಬಂಟ್ವಾಳ ತಾಲೂಕು ಫರಂಗಿಪೇಟೆ ಶ್ರೀ ಕೊರ್ದಬ್ಬು ದೈವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 1 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಅದರ ಡಿ.ಡಿ. ಯನ್ನು ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಇದನ್ನೂ ಓದಿ: ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿ
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತುಂಬೆ ವಲಯದ ಮೇಲ್ವಿಚಾರಕಿ ಶ್ರೀಮತಿ ಮಮತಾ ಸಂತೋಷ್, ದೈವಸ್ಥಾನದ ಆಡಳಿತ ಮೊಕ್ತೇಸರರಾದ ಭಾಸ್ಕರ ಚೌಟ, ಸಮಿತಿಯ ಸದಸ್ಯರಾದ ಉಮೇಶ್ ಶೆಟ್ಟಿ ಬರ್ಕೆ,
ಭರತ್ ಕುಮ್ದೇಲು, ಹರಿಕೃಷ್ಣ ಕಡೆಗೋಳಿ, ಪದ್ಮನಾಭ, ಗೋವಿನ್ ತೋಟ ಅಶೋಕ್ ,ಜಗದೀಶ್ ಕುಮ್ದೆಲು, ಸೇವಾ ಪ್ರತಿನಿಧಿ ಅಮಿತಾ, ಒಕ್ಕೂಟದ ಅಧ್ಯಕ್ಷರಾದ ಸುಕೇಶ್ ಶೆಟ್ಟಿ ತೇವಕಾಡು ಪದಾಧಿಕಾರಿಗಳಾದ ವಿನುತ ಮತ್ತು ಮೋಹಿನಿ ಇವರು ಉಪಸ್ಥಿತರಿದ್ದರು.




