Wed. Feb 26th, 2025

Sullia: 17 ವರ್ಷಗಳ ಹಿಂದೆ ಸುಳ್ಯವನ್ನೇ ಬೆಚ್ಚಿಬೀಳಿಸಿದ ಮೀರಾ ಬಾಲಕೃಷ್ಣ ಕೊಲೆ ಪ್ರಕರಣ – ಐವರು ಆರೋಪಿಗಳು ದೋಷ ಮುಕ್ತ

ಸುಳ್ಯ:(ಫೆ.26) 17 ವರ್ಷಗಳ ಹಿಂದೆ ಸುಳ್ಯವನ್ನೇ ಬೆಚ್ಚಿ ಬೀಳಿಸಿದ ಐವರ್ನಾಡಿನ ಮೀರಾ ಬಾಲಕೃಷ್ಣ ಕೊಲೆ ಪ್ರಕರಣದ ಆರೋಪಿಗಳನ್ನು ದೋಷಮುಕ್ತಗೊಳಿಸಿ ನ್ಯಾಯಾಲಯ ಆದೇಶ ಮಾಡಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಬೆಳ್ತಂಗಡಿ : ಅಂಡಿಂಜೆ ಗ್ರಾಮದ ಕಲ್ಲತ್ತಿ ಪ್ರದೇಶದಲ್ಲಿ ಕಾಡ್ಗಿಚ್ಚು


ದಿನಾಂಕ 02/03/2008 ರಂದು ಬೆಳಗ್ಗಿನ ಜಾವ ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಮೀರಾ ಬಾಲಕೃಷ್ಣರನ್ನು ಅಪರಿಚಿತರು ಮನೆಯ ಒಳಗೆ ಅಕ್ರಮ ಪ್ರವೇಶ ಮಾಡಿ ಮೀರಾ ರವರ ಕೈ ಕಾಲುಗಳನ್ನು ಕಟ್ಟಿ ಹಾಕಿ, ಬಾಯಿಗೆ ಬಟ್ಟೆ ತುರುಕಿ ಕೊಲೆ ಮಾಡಿ ಮನೆಯಲ್ಲಿದ್ದ ಹಣ ಒಡವೆ ದೋಚಲು ಪ್ರಯತ್ನಿಸಿದ್ದು,

ಆ ಸಮಯದಲ್ಲಿ ಮನೆ ಕೆಲಸದಾಕೆ ವಿಮಲ ಎಂಬುವರು ಮನೆಯ ಒಳಗಡೆ ಪ್ರವೇಶಿಸಿರುವುದನ್ನು ನೋಡಿ ಆಕೆಯ ಮೇಲೆ ಕೂಡಾ ಹಲ್ಲೆಯನ್ನು ಮಾಡಿ ಆರೋಪಿಗಳು ಪರಾರಿಯಾಗಿದ್ದರು.

ಮತ್ತು ಆರೋಪಿಗಳು ವಿಮಲ ರವರಿಗೆ ಹಲ್ಲೆ ಮಾಡಿದ್ದ ಕಾರಣ ಅವರಿಗೂ ಕೂಡಾ ಪ್ರಜ್ಞೆ ಹೋಗಿದ್ದು ಬಳಿಕ ಸೇರಿದ ಜನರು ವಿಮಲರವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಆ ಪ್ರಕಾರ ವಿಮಲರವರು ದೂರು ನೀಡಿದ್ದರು.


ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಬಳಿಕ ಪ್ರಕರಣದಲ್ಲಿ ತನಿಖೆಯ ಪ್ರಗತಿ ಕಾಣದೆ ಇದ್ದುದರಿಂದ ಪ್ರಕರಣವನ್ನು ಸಿ.ಐ.ಡಿ ಕಛೇರಿಯ ಅಂದಿನ ಡಿ. ಎನ್. ಪಿ ಆಡ.ಎನ್. ಎಂ. ರಾಮಲಿಂಗಪ್ಪ ಇವರ ನೇತೃತ್ವದಲ್ಲಿ ತನಿಖೆ ನಡೆಸಲು ಸರ್ಕಾರ ಆದೇಶಿಸಿತ್ತು ಅವರ ತನಿಖೆ ಆಧಾರದ ಮೇರೆಗೆ ಒಟ್ಟು 6 ಆರೋಪಿಗಳ ಹೆಸರನ್ನು ಹೆಸರಿಸಿ ಅವರ ಪೈಕಿ ಐದು ಆರೋಪಿಗಳನ್ನು ಪ್ರಕರಣ

ನಡೆದ ಸುಮಾರು 4 ವರ್ಷ ಬಳಿಕ ಪತ್ತೆ ಮಾಡಿ ಅವರನ್ನು ದಸ್ತಗಿರಿ ಮಾಡಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 120 ಬಿ. 448,396 ಮತ್ತು 397 ಐ.ಪಿ.ಸಿ ಯಂತೆ ದೋಷರೋಪಣ ಪಟ್ಟಿಯನ್ನು ಜಿಲ್ಲಾ ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ಸಿ.ಐ.ಡಿ ಪೊಲೀಸರಿಂದ ದಾಖಲಿಸಲಾಗಿತ್ತು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು