Mon. Mar 10th, 2025

Bantwal: ಕಾರಿಗೆ ಸೆಲಿನಾ ಬಸ್ ಡಿಕ್ಕಿ – ಕಾರು ಚಾಲಕನಿಗೆ ಗಂಭೀರ ಗಾಯ

ಬಂಟ್ವಾಳ:(ಮಾ .5) ಖಾಸಗಿ ಸಿ.ಸಿ.ಬಸ್ ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಸರ್ಕಲ್ ಬಳಿ ನಡೆದಿದೆ.

ಇದನ್ನೂ ಓದಿ: ಬೆಳ್ತಂಗಡಿ: “ಬಿ” ಖಾತೆಯಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಕಲಾಪದಲ್ಲಿ ಪ್ರಶ್ನಿಸಿದ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್


ಕೇರಳ ಮೂಲದ ವಿಶ್ವನಾಥ ಶೆಟ್ಟಿ ಗಾಯಗೊಂಡ ಕಾರು ಚಾಲಕ ಎಂದು ಗುರುತಿಸಲಾಗಿದೆ.
ಬಿಸಿರೋಡಿನ ಕಡೆಯಿಂದ ಮೆಲ್ಕಾರ್ ಕಡೆಗೆ ಕಾಂಕ್ರೀಟ್ ರಸ್ತೆಯಲ್ಲಿ ಹೋಗುತ್ತಿದ್ದ ವಿಶ್ವನಾಥ ಅವರ ಕಾರಿಗೆ ಮೆಲ್ಕಾರ್ ಪಾಣೆಮಂಗಳೂರು ಕಡೆಯಿಂದ ಬರುತ್ತಿದ್ದ ಸೆಲಿನಾ ಬಸ್ ವಿರುದ್ದ ದಿಕ್ಕಿನಲ್ಲಿ ಬಂದು ಡಿಕ್ಕಿ ಹೊಡೆದಿದೆ.


ಬಸ್ ಚಾಲಕನ ನಿಯಮ ಮೀರಿದ ಚಾಲನೆಯೇ ಘಟನೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ.


ಬಿಸಿರೋಡಿನಿಂದ ಮೆಲ್ಕಾರ್ ಕಡೆಗೆ ಹೋಗುವ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ‌ತಿಳಿಸಿದ್ದಾರೆ.
ಘಟನೆಯಿಂದ ಕಾರು‌ ಸಂಪೂರ್ಣ ಜಖಂಗೊಂಡಿದ್ದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ‌ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
.

Leave a Reply

Your email address will not be published. Required fields are marked *