Mon. Mar 10th, 2025

Bantwal: ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ – ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಗೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ

ಬಂಟ್ವಾಳ:(ಮಾ.7) ಕಳೆದ 2 ವರ್ಷಗಳಿಂದ ಕರ್ನಾಟಕ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಹಲವಾರು ಮಾನವ ಹತ್ಯೆ ಪ್ರಕರಣಗಳು ಸೇರಿದಂತೆ ಪೋಲಿಸ್ ಠಾಣೆಗಳ ಮೇಲೆ ದಾಳಿಗಳು ಒಳಗೊಂಡಂತೆ ಹಿರಿಯ ಪೋಲಿಸ್ ಅಧಿಕಾರಿಗಳ ಮೇಲೆ ಕಲ್ಲು ತೂರಾಟದ ಜೊತೆಗೆ ದಾಳಿ ಆಗುತ್ತಿರುವುದು ಮಾಧ್ಯಮಗಳಿಂದ ಹಾಗೂ ಆಯಾ ಪ್ರದೇಶಗಳಲ್ಲಿನ ಸಿ ಸಿ ಟಿ ವಿ ಗಳಿಂದ ಸತ್ಯಾಸತ್ಯತೆ ತಿಳಿದು ಬರುತ್ತಿದೆ.

ಇದನ್ನೂ ಓದಿ: ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ


ಹಾಡು ಹಗಲೇ ಹಿಂದೂ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ನಡೆಯುತ್ತಿದ್ದು ,ಅಲ್ಲಲ್ಲಿ ಹಿಂದೂಗಳ ಮೇಲೆ ದಾಳಿ ಪ್ರಕರಣ ಸೇರಿದಂತೆ ಹತ್ಯೆಗಳು ನಡೆಯುತ್ತಿವೆ . ಕೆಲವೊಂದು ಕಡೆಗಳಲ್ಲಿ ಅಂಗಡಿ ,ಮಳಿಗೆಗಳಿಗೆ , ಬೆಂಕಿ ಹಚ್ಚುವ ಪ್ರಕರಣಗಳು , ರಾಷ್ಟ್ರ ದ್ರೋಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗ ತೊಡಗಿವೆ.


ಈ ಎಲ್ಲಾ ಪ್ರಕರಣಗಳಲ್ಲಿರುವ ಆರೋಪಗಳು ಸಿ.ಸಿ.ಟಿ.ವಿ ಹಾಗೂ ಮಾಧ್ಯಮಗಳ ದೃಶ್ಯಾವಳಿಯಲ್ಲಿ ಕಂಡು ಬಂದರೂ ಸಹ ಉನ್ನತ ಪೋಲಿಸ್ ಅಧಿಕಾರಿಗಳು ಯಾವುದೋ ಒಂದು ಮುಜುಗರದಲ್ಲಿ ಆರೋಪಿಗಳ ಮೇಲೆ ಯಾವುದೇ ಪ್ರಕರಣ ದಾಖಲಿಸದೇ ಜನಸಾಮಾನ್ಯರ ತೋರಿಕೆಗೆ ಸಲುವಾಗಿ ಕೆಲವೇ ಕೆಲವು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾಗಿಸುತ್ತಿದ್ದಾರೆ ಎಂದು ತಿಳಿದು ಬರುತ್ತಿದೆ.


ಇದಕ್ಕೆಲ್ಲ ಪೂರಕವೆಂಬಂತೆ ಇತ್ತೀಚಿಗೆ ದ.ಕ ಜಿಲ್ಲೆ ಬಂಟ್ವಾಳ ತಾಲೂಕು ಫರಂಗಿಪೇಟೆ ನಿವಾಸಿ ದಿಗಂತ್ ಎಂಬ ಪಿ.ಯು.ಸಿ ಕಾಲೇಜು ವಿದ್ಯಾರ್ಥಿ ದಿಢೀರನೆ ನಿಗೂಢವಾಗಿ ನಾಪತ್ತೆಯಾಗಿ 6-7 ದಿನಗಳೂ ಕಳೆದರೂ ವಿದ್ಯಾರ್ಥಿಯ ಬಗ್ಗೆ ಸುಳಿವು ಲಭಿಸದೇ ಇರುವುದರಿಂದ ಪೋಲಿಸ್ ಇಲಾಖಾ ತನಿಖೆಯ ಮೇಲೆ ಸಾರ್ವಜನಿಕರಿಗೆ ಅನುಮಾನ ಸೃಷ್ಟಿಯಾಗಿದೆ.

ಈ ಹಿನ್ನಲೆಯಲ್ಲಿ ಕರಾವಳಿ ಭಾಗದಲ್ಲಿನ ಬಹುತೇಕ ವಿದ್ಯಾರ್ಥಿಗಳ ಪೋಷಕರು ಆತಂಕಕರ ಭಯದ ವಾತಾವರಣದಲ್ಲಿದ್ದಾರೆ .ಕಾನೂನು ಸುವ್ಯವಸ್ಥೆ ಕಾಪಾಡುವ ಪೋಲಿಸ್ ಅಧಿಕಾರಿಗಳ ಹಾಗೂ ಪೋಲಿಸ್ ಠಾಣೆಗಳ ಮೇಲೆ ದಾಳಿ ಆಗುತ್ತಿರುವುದರ ಕಣ್ಣಿಗೆ ಕಾಣುತ್ತಿರುವುದರಿಂದ ಸಾರ್ವಜನಿಕರು ಕರ್ನಾಟಕ ರಾಜ್ಯದ ಪೋಲಿಸ್ ಇಲಾಖೆಯ ಮೇಲೆ ಇಟ್ಟಿರುವ ವಿಶ್ವಾಸ ಕಡಿಮೆಯಾಗುತ್ತಿದೆ.


ಈ ಎಲ್ಲಾ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯದ ಪೋಲಿಸ್ ಮಹಾನಿರ್ದೇಶಕರು ಸೇರಿದಂತೆ ಉನ್ನತ ಮಟ್ಟದ ಹಿರಿಯ ಪೋಲಿಸ್ ಅಧಿಕಾರಿಗಳಿಗೆ ಕೇಂದ್ರದಿಂದ ಸೂಕ್ತ ನಿರ್ದೇಶನ ನೀಡಿ ಅಮಾಯಕರಿಗೆ ಆಗುವ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕಾಗಿ ವಿನಂತಿ ಮಾಡಿದ್ದಾರೆ.

Leave a Reply

Your email address will not be published. Required fields are marked *