Mon. Mar 10th, 2025

Ullal: ರೈಲಿನಲ್ಲಿ ಹೃದಯಾಘಾತ – ಗ್ರಾ.ಪಂ.ಸದಸ್ಯ ಮೃತ್ಯು!!

ಉಳ್ಳಾಲ:(ಮಾ.7) ದಿಲ್ಲಿಯಿಂದ ಮಂಗಳೂರು ಕಡೆ ರೈಲಿನಲ್ಲಿ ವಾಪಸಾಗುತ್ತಿದ್ದಾಗ ಹೃದಯಾಘಾತಕ್ಕೀಡಾಗಿ ಮುನ್ನೂರು ಗ್ರಾಮ ಪಂಚಾಯತ್‌ ಸದಸ್ಯ, ಕುತ್ತಾರು ಮದನಿನಗರ నిವಾಸಿ ಅಬ್ದುಲ್ ಅಝೀಝ್ ಆರ್.ಕೆ.ಸಿ. (42) ಮೃತಪಟ್ಟ ಘಟನೆ ಸಂಭವಿಸಿದೆ.

ಇದನ್ನೂ ಓದಿ: ⭕ಬಿಹಾರ: ನಳಂದದಲ್ಲಿ ಯುವತಿಯ ಬರ್ಬರ ಹತ್ಯೆ


ಉದ್ಯಮಿಯಾಗಿದ್ದ ಅವರು ವ್ಯವಹಾರ ನಿಮಿತ್ತ ದಿಲ್ಲಿಗೆ ತೆರಳಿದ್ದರು. ಅಂಕೋಲಾ ಸಮೀಪ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಮುಂದಿನ ನಿಲ್ದಾಣ ಕುಮಟಾದಲ್ಲಿ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯುವ ಪ್ರಯತ್ನ ಮಾಡಲಾಯಿತಾದರೂ,

ಅದಾಗಲೇ ಅಬ್ದುಲ್ ಅಝೀಝ್ ಮೃತಪಟ್ಟಿದ್ದರು. ಕಾಂಗ್ರೆಸ್‌ ಗ್ರಾಮ ಸಮಿತಿ ಅಧ್ಯಕ್ಷರಾಗಿದ್ದ ಅವರು ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದರು.

Leave a Reply

Your email address will not be published. Required fields are marked *