Mon. Mar 10th, 2025

Bantwal: ಪಿಯುಸಿ ವಿದ್ಯಾರ್ಥಿ ದಿಗಂತ್‌ ನಾಪತ್ತೆ ಪ್ರಕರಣ – ನಾಪತ್ತೆಯಾದ ಸ್ಥಳದಲ್ಲಿ ಕೂಂಬಿಂಗ್ ಕಾರ್ಯ ಆರಂಭ

ಬಂಟ್ವಾಳ:(ಮಾ.8) ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆ ಅಮ್ಮೆಮಾರ್ ನಿವಾಸಿ ಅಪ್ರಾಪ್ತ ಬಾಲಕ ದಿಗಂತ್ ಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಇಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್ ‌ಎನ್.ನೇತೃತ್ವದ ಜಿಲ್ಲಾ ಪೋಲೀಸ್ ತಂಡ ನಾಪತ್ತೆ ಘಟನೆ ನಡೆದ ಸ್ಥಳದ ಸುತ್ತಲಿನ ಸ್ಥಳಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಕೂಂಬಿಂಗ್ ಕಾರ್ಯ ಆರಂಭವಾಗಿದೆ.


ಫೆ. 25 ರಂದು ಸಂಜೆ ಫರಂಗಿಪೇಟೆ ರೈಲ್ವೆ ಹಳಿಯಲ್ಲಿ ರಕ್ತದ ಕಲೆಯ ಚಪ್ಪಲಿ ಹಾಗೂ ಮೊಬೈಲ್ ಫೋನ್ ಸ್ಥಳದಲ್ಲಿ ಪತ್ತೆಯಾಗಿದ್ದು, ಅಪ್ರಾಪ್ತ ಬಾಲಕ ದಿಗಂತ್ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ.


ಅ ಬಳಿಕ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಪ್ರಕರಣ ದಾಖಲಾಗಿತ್ತು. ಕಳೆದ 12 ದಿನಗಳಿಂದ ದಿಗಂತ್ ನ ಪತ್ತೆಗಾಗಿ ವಿವಿಧ ರೀತಿಯ ಕಾರ್ಯಚರಣೆಗಳು ಪೋಲೀಸರ ತಂಡ ನಡೆಸಿತ್ತು.


ಆದರೆ ಹರಸಾಹಸಪಟ್ಟರೂ ಪೋಲೀಸರಿಗೆ ಸವಾಲಾಗಿ ಪರಿಣಮಿಸಿದ ಈ ಪ್ರಕರಣ ಇನ್ನೂ ಕೂಡ ಪತ್ತೆ ಮಾಡುವಲ್ಲಿ ಯಶಸ್ವಿಯಾಗಲಿಲ್ಲ.ಹಾಗಾಗಿ ವಿವಿಧ ಆಯಾಮಗಳಲ್ಲಿ 40 ಕ್ಕೂ ಅಧಿಕ ಪೋಲೀಸರ ತಂಡ ಕೆಲಸ ಮಾಡಿದೆಯಾದರೂ ದಿಗಂತ್ ಪತ್ತೆಯಾಗದ ಹಿನ್ನೆಲೆಯಲ್ಲಿ ಎಸ್.ಪಿ.ಇಂದು ಸರ್ಚ್ ಕಾರ್ಯ ಆರಂಭಿಸಿದೆ.


ವಿಶೇಷ ತಂಡ ಕಾರ್ಯಚರಣೆ ಬಂಟ್ವಾಳ ಸಬ್ ಡಿವಿಜನ್ ನ ಸುಮಾರು 9 ಪೋಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗಳು ಎಸ್.ಐ.ಗಳು ಹಾಗೂ ಸುಮಾರು 100 ಕ್ಕೂ ಅಧಿಕ ಪೋಲೀಸರ ತಂಡ ಬೆಳಿಗ್ಗೆಯಿಂದಲೇ ಕೂಂಬಿಂಗ್ ಕಾರ್ಯದಲ್ಲಿ ತೊಡಗಿಕೊಂಡಿದೆ.
ಡಿ‌ಎಆರ್ ತಂಡದ 30 ಪೋಲೀಸರು,ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ, ಎಫ್.ಎಸ್ .ಎಲ್..ತಂಡ,ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮರಾಗಳನ್ನು ದಿಗಂತ್ ನಾಪತ್ತೆಯಾಗಿದ್ದ ಘಟನಾ ಸ್ಥಳದ ಸುತ್ತಮುತ್ತಲಿನ ಸುಮಾರು 5 ಕಿ.ಮೀ.ನ ಭಾಗದಲ್ಲಿ ಸರ್ಚ್ ಮಾಡಲು ಯೋಜನೆ ತಯಾರಿಸಿ ಕಾರ್ಯ ಆರಂಭಿಸಿದೆ. ನೇತ್ರಾವತಿ ನದಿ ಭಾಗದ ಸುತ್ತಲಿನ ಭಾಗದಲ್ಲಿ ದೋಣಿ ಬಳಸಿಕೊಂಡು ‌ನದಿಯಲ್ಲಿ ಕೂಡ ಸರ್ಚ್ ಮಾಡಲಾಗುತ್ತಿದೆ.


ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್.ಅಡಿಷನಲ್ ಎಸ್.ಪಿ.ರಾಜೇಂದ್ರ, ಡಿ.ವೈ.ಎಸ್.ಪಿ.ವಿಜಯಪ್ರಸಾದ್, ಇನ್ಸ್ ಪೆಕ್ಟರ್ ಗಳಾದ ಶಿವಕುಮಾರ್, ಅನಂತಪದ್ಮನಾಭ, ನಾಗಾರಾಜ್ ಎಚ್, ಎಸ್‌ಐ.ಗಳಾದ ನಂದಕುಮಾರ್, ಪ್ರಸನ್ನ,ಅವಿನಾಶ್, ಹರೀಶ್,ಉದಯರವಿ,ರಾಮಕೃಷ್ಣ,ಕಿಶೋರ್, ಸಮರ್ಥ್, ಅರ್ಜುನ್, ಮುರಳೀಧರ, ಆನಂದ ಮತ್ತು ಕೌಶಿಕ್ ಸಹಿತ ಅನೇಕ ಎಸ್. ಐ.ಗಳು ಹತ್ತು ಟೀಮ್ ನಲ್ಲಿ ಕಾರ್ಯ ಮಾಡುತ್ತಿದೆ.

Leave a Reply

Your email address will not be published. Required fields are marked *